Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕುಮಾರ ಬಂಗಾರಪ್ಪ ಕ್ಷಮೆ ಕೇಳಬೇಕು : ಶಿವಣ್ಣ ಅಭಿಮಾನಿಗಳಿಂದ ಮನೆಗೆ ಮುತ್ತಿಗೆ..!

---Advertisement---

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಎದುರು ನಿಂತು ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಈ ಸೋಲಿನ ಬಳಿಕ ಗೀತಾ ಹಾಗೂ ಸಿವರಾಜ್ ಕುಮಾರ್ ಅವರನ್ನು ಗೇಲಿ ಮಾಡಿದ್ದರು. ಗೀತಾ ಅವರಿಗೆ ಇನ್ನ್ಯಾವತ್ತು ವಾಪಸ್ ಬರಬೇಡ ಎಂದರೆ, ಶಿವಣ್ಣ ಅವರಿಗೆ ನಮ್ಮೂರ ಜಾತ್ರೆಯಲ್ಲಿ ಕುಣಿಯುವುದಕ್ಕೆ ಅರ್ಜಿ ಹಾಕಿ ಎಂದಿದ್ದರು. ಈ ಮಾತುಗಳು ಇದೀಗ ಅಭಿಮಾನಿಗಳನ್ನು ಕೆರಳಿಸಿವೆ. ಕುಮಾರ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಸದಾಶಿವ ನಗರದ ನಿವಾಸಕ್ಕೆ ಹೋದ ಶಿವಣ್ಣ ಅಭಿಮಾನಿಗಳು, ಗೇಟ್ ತೆಗೆದು ಒಳಗೆ ಹೋಗಿದ್ದಾರೆ. ಕುಮಾರ ಬಂಗಾರಪ್ಪ ಅವರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಲಾಟೆ ತಾರಕಕ್ಕೇರುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಭಾಯಿಸಲು ಪ್ರಯತ್ನ ಪಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಹಾಗೂ ಪೊಲೀಸರ ನಡುವೆಯೂ ಮಾತಿನ ಚಕಮಕಿ ನಡೆದಿದೆ. ಅಲ್ಲಿಂದ ಹೊರ ಹೋಗುವಂತೆ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಚುನಾವಣೆಯ ಫಲಿತಾಂಶ ಬರುತ್ತಿದ್ದಂತೆ, ಗೀತಾ ಸೋಲುತ್ತಿದ್ದಂತೆ ಕುಮಾರ ಬಂಗಾರಪ್ಪ ಟ್ವೀಟ್ ಮಾಡಿದ್ದಾರೆ. ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗಲಾರದು. ಬೆದರಿಸುವ, ಹುಷಾರ್ ಎನ್ನುವ ಮಾತುಗಳೇನಿದ್ದರೂ ಗಂಟಲಿನ ಒಳಗೆ, ನಾಲ್ಕು ಗೋಡರಯ ಒಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡಿರುವರಿಗೆ ಇದು ಕೊನೆಯ ಎಚ್ಚರಿಕೆ. ನೀವೂ ಹಿಂತುರಿಗಿ ಬರುವುದು ಕನಸಿನ ಮಾತು ಎಂದು ಪೋಸ್ಟ್ ಹಾಕಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...