Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಮಾರ ಬಂಗಾರಪ್ಪ ಕ್ಷಮೆ ಕೇಳಬೇಕು : ಶಿವಣ್ಣ ಅಭಿಮಾನಿಗಳಿಂದ ಮನೆಗೆ ಮುತ್ತಿಗೆ..!

---Advertisement---

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿವೈ ರಾಘವೇಂದ್ರ ಎದುರು ನಿಂತು ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಈ ಸೋಲಿನ ಬಳಿಕ ಗೀತಾ ಹಾಗೂ ಸಿವರಾಜ್ ಕುಮಾರ್ ಅವರನ್ನು ಗೇಲಿ ಮಾಡಿದ್ದರು. ಗೀತಾ ಅವರಿಗೆ ಇನ್ನ್ಯಾವತ್ತು ವಾಪಸ್ ಬರಬೇಡ ಎಂದರೆ, ಶಿವಣ್ಣ ಅವರಿಗೆ ನಮ್ಮೂರ ಜಾತ್ರೆಯಲ್ಲಿ ಕುಣಿಯುವುದಕ್ಕೆ ಅರ್ಜಿ ಹಾಕಿ ಎಂದಿದ್ದರು. ಈ ಮಾತುಗಳು ಇದೀಗ ಅಭಿಮಾನಿಗಳನ್ನು ಕೆರಳಿಸಿವೆ. ಕುಮಾರ ಬಂಗಾರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಸದಾಶಿವ ನಗರದ ನಿವಾಸಕ್ಕೆ ಹೋದ ಶಿವಣ್ಣ ಅಭಿಮಾನಿಗಳು, ಗೇಟ್ ತೆಗೆದು ಒಳಗೆ ಹೋಗಿದ್ದಾರೆ. ಕುಮಾರ ಬಂಗಾರಪ್ಪ ಅವರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಲಾಟೆ ತಾರಕಕ್ಕೇರುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಭಾಯಿಸಲು ಪ್ರಯತ್ನ ಪಟ್ಟಿದ್ದಾರೆ. ಈ ವೇಳೆ ಅಭಿಮಾನಿಗಳು ಹಾಗೂ ಪೊಲೀಸರ ನಡುವೆಯೂ ಮಾತಿನ ಚಕಮಕಿ ನಡೆದಿದೆ. ಅಲ್ಲಿಂದ ಹೊರ ಹೋಗುವಂತೆ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಚುನಾವಣೆಯ ಫಲಿತಾಂಶ ಬರುತ್ತಿದ್ದಂತೆ, ಗೀತಾ ಸೋಲುತ್ತಿದ್ದಂತೆ ಕುಮಾರ ಬಂಗಾರಪ್ಪ ಟ್ವೀಟ್ ಮಾಡಿದ್ದಾರೆ. ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗಲಾರದು. ಬೆದರಿಸುವ, ಹುಷಾರ್ ಎನ್ನುವ ಮಾತುಗಳೇನಿದ್ದರೂ ಗಂಟಲಿನ ಒಳಗೆ, ನಾಲ್ಕು ಗೋಡರಯ ಒಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡಿರುವರಿಗೆ ಇದು ಕೊನೆಯ ಎಚ್ಚರಿಕೆ. ನೀವೂ ಹಿಂತುರಿಗಿ ಬರುವುದು ಕನಸಿನ ಮಾತು ಎಂದು ಪೋಸ್ಟ್ ಹಾಕಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment