Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಲಕನ ಮೃತದೇಹದ ಮುಂದೆಯೇ ಕಠಿಣ ಶಿಕ್ಷೆಗೆ ಆಗ್ರಹಿಸಿದ ಕುಮಾರಸ್ವಾಮಿ : ವೈದ್ಯ ಅಮಾನತು..!

Facebook
Twitter
Telegram
WhatsApp

ತುಮಕೂರು: ವೈದ್ಯೋ ನಾರಾಯಣ ಹರಿ ಅನ್ನೋ ಮಾತು ಇತ್ತು. ರೋಗಿಗಳಿಗೆ ವೈದ್ಯರೆ ದೇವರಾದಾಗ. ಆದ್ರೆ ಈಗ ಎಲ್ಲವೂ ಬಿಸಿನೆಸ್ ಆದಾಗಿನಿಂದ ಈ ಪದಕ್ಕೆ ಅಲ್ಲೋ ಇಲ್ಲೋ.. ಆಗಲೋ.. ಈಗಲೋ ಒಮ್ಮೆಮ್ಮೆ ಬೆಲೆ ಸಿಗುತ್ತೆ. ಇಷ್ಟೆಲ್ಲ ಹೇಳುವುದಕ್ಕೆ ಕಾರಣ ತುಮಕೂರಿನಲ್ಲಿ ನಡೆದ ಘಟನೆ.

ಆರು ವರ್ಷದ ಬಾಲಕ ಸಾಧಿಕ್ ಎಂಬಾತ ಆಟವಾಡುವಾಗ ಸಂಪ್ ನಲ್ಲಿ ಬಿದ್ದು ಬಿಟ್ಟಿದ್ದ. ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಕರೆದರು ಇಲ್ಲ.. ಕಷ್ಟಪಟ್ಟು ಆಸ್ಪತ್ರೆಗೆ ಕರೆದುಕೊಂಡು ಹೋದರೆ ಅಲ್ಲಿಯೂ ವೈದ್ಯರಿಲ್ಲ. ಚಿಕಿತ್ಸೆ ಸಿಗದೆ ಚಿಕ್ಕ ಮಗು ಬದುಕುವುದಾದರೂ ಹೇಗೆ. ಮಗುವನ್ನು ಕಳೆದುಕೊಂಡು ಕುಟುಂಬಸ್ಥರು ದುಃಖದಲ್ಲಿದ್ದರು. ಅಂತ್ಯಸಂಸ್ಕಾರ ಮಾಡುವ ಮುನ್ನ ಜೆಡಿಎಸ್ ಪಂಚರತ್ನ ಯಾತ್ರೆ ತುಮಕೂರು ತಲುಪಿತ್ತು. ಕುಮಾರಸ್ವಾಮಿ ಅವರು ತುಮಕೂರಿನಲ್ಲಿದ್ದರು.

ಹೇಳಿ ಕೇಳಿ ಬಡವರ ಕಷ್ಟಗಳಿಗೆ ಕುಮಾರಸ್ವಾಮಿ ಅವರು ವಿಪರೀತ ಕರಗುತ್ತಾರೆ. ಮೃತ ಬಾಲಕನ ಕುಟುಂಬಸ್ಥರು ಬಾಲಕನ ಮೃತದೇಹವನ್ನು ತೆಗೆದುಕೊಂಡು ಹೋಗಿ ಕುಮಾರಸ್ವಾಮಿ ಅವರ ಮುಂದಿಟ್ಟು ನಡೆದಿದ್ದೆಲ್ಲವನ್ನು ವಿವರಿಸಿದ್ದರು. ಇದನ್ನು ಕಂಡು ಕುಮಾರಸ್ವಾಮಿ ಮರುಗಿದರು. ಮೃತದೇಹದ ಮುಂದೆಯೇ ಈ ಅನಾಹುತಕ್ಕೆ ಕಾರಣರಾದ ವೈದ್ಯರು ಹಾಗೂ ಆಂಬ್ಯುಲೆನ್ಸ್ ಡ್ರೈವರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

ಇದೀಗ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ವೈದ್ಯ ರೋಹಿತ್ ಹಾಗೂ ಚಾಲಕ ಸೀನಪ್ಪನನ್ನು ಅಮಾನತುಗೊಳಿಸಿದ್ದಾರೆ. ಆಸ್ಪತ್ರೆಯಲ್ಲಿರುವ ಸಿಸಿಟಿವಿ ಕೂಡ ಕೆಲಸ ಮಾಡುತ್ತಿಲ್ಲ. ಕರ್ತವ್ಯ ಲೋಪದಡಿ ಅಮಾನತುಗೊಳಿಸಿದ್ದು, ಹದಿನೈದು ದಿನಗಳ ಒಳಗಾಗಿ ಉತ್ತರ ನೀಡುವಂತೆ ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!