ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಬಹಳ ಕುತೂಹಲದಿಂದ ಕಾಯುತ್ತಿದ್ದ ರಾಜ್ಯ ವಿಧಾನಸಭಾ ಚುನಾವಣೆಯೇನೋ ಮುಗಿದು ಹೋಗಿದೆ. ಫಲಿತಾಂಶಕ್ಕಾಗಿ ರಾಷ್ಟ್ರೀಯ ಪಕ್ಷಗಳು ಒದ್ದಾಡುತ್ತಿವೆ. ಏನೇ ಒದ್ದಾಡಿದರೂ ಇವತ್ತು ಒಂದು ದಿನ ಕಾಯಲೇಬೇಕಾದ ಪರಿಸ್ಥಿತಿ ಇದೆ. ನಾಳೆ ಮಧ್ಯಾಹ್ನದ ಒಳಗೆ ಒಂದು ಚಿತ್ರಣ ಸಿಕ್ಕಿ ಬಿಡುತ್ತೆ. ಅದರ ಜೊತೆಗೆ ಸಮೀಕ್ಷೆಗಳು ಕೂಡ ಈ ಬಾರಿಯೂ ಫಲಿತಾಂಶ ಅತಂತ್ರವಾಗಲಿದೆ ಎಂದೇ ಹೇಳುತ್ತಿವೆ. ಹೀಗಾಗಿ ಎಲ್ಲರ ಚಿತ್ತ ಕುಮಾರಸ್ವಾಮಿಯತ್ತ ನೆಟ್ಟಿದೆ.
ಕುಮಾರಸ್ವಾಮಿ ಅವರು ಕೂಡ ಮೈತ್ರಿ ರಚನೆಯ ಬಗ್ಗೆ ಸುಳಿವು ನೀಡಿದ್ದಾರೆ. ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷದ ಜೊತೆಗೆ ಮೈತ್ರಿಗೆ ಸಿದ್ಧರಿದ್ದೇವೆ. ಆದರೆ ಅವರು ನಮ್ಮ ಷರತ್ತಿಗೆ ಒಪ್ಪಿಕೊಂಡರೆ ಮಾತ್ರ ಎಂದಿದ್ದಾರೆ. ಕುಮಾರಸ್ವಾಮಿ ಅವರು ಹಾಕಿರುವ ಷರತ್ತು ಈ ರೀತಿ ಇದೆ.
* ನಮ್ಮ ಬೇಡಿಕೆ ಈಡೇರಿಸುವ ಪಕ್ಷದ ಜೊತೆಗೆ ಮಾತ್ರ ಮೈತ್ರಿ
* ಸರ್ಕಾರ ನಡೆಸಲು ಮುಕ್ತ ಸ್ವಾತಂತ್ರ್ಯ ಬೇಕು
* ಜೆಡಿಎಸ್ ಪ್ರಣಾಳಿಕೆಯಲ್ಲಿನ ಭರವಸೆ ಈಡೇರಿಸಬೇಕು
* ಮಂಡ್ಯ, ಹಾಸನದಲ್ಲಿ ಮೈತ್ರಿ ಪಕ್ಷದ ಹಸ್ತಕ್ಷೇಪ ಬೇಡ
* ಜೆಡಿಎಸ್ ಪಕ್ಷಕ್ಕೆ ಸರ್ಕಾರದಲ್ಲಿ ಪ್ರಮುಖ ಖಾತೆ ಬೇಕು
* ಚರ್ಚಿಸದೇ ಸೈದ್ಧಾಂತಿಕ ತೀರ್ಮಾನ ಕೈಗೊಳ್ಳಬಾರದು ಎಂಬ ಷರತ್ತುಗಳನ್ನು ಹಾಕಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್