ಪರಿಷತ್ ಚುನಾವಣೆ : ಯಡಿಯೂರಪ್ಪ ಬಗ್ಗೆ ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ..!

suddionenews
1 Min Read

ಚಿಕ್ಕಬಳ್ಳಾಪುರ: ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿದೆ. ಎಲ್ಲಾ ಪಕ್ಷದ ಮುಖಂಡರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ಪರಿಷತ್ ಚುನಾವಣಾ ವಿಚಾರಕ್ಕೆ ಹೊಸ ಬಾಂಬ್ ಒಂದನ್ನ ಸಿಡಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಯಡಿಯೂರಪ್ಪ ಅವರು ಕರೆ ಮಾಡಿ ಬೆಂಬಲ ಕೋರಿದ್ದಾರೆ ಎಂದಿದ್ದಾರೆ. ರಾಜಕೀಯ ಏರಿಳಿತಗಳನ್ನ ಗಮನದಲ್ಲಿಟ್ಟುಕೊಂಡು ಯಡಿಯೂರಪ್ಪ ನವರು ಬೆಂಬಲ ಕೇಳಿದ್ದಾರೆ. ಇಷ್ಟೇ ಅಲ್ಲ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರದ ವೇಳೆ ಅನೇಕ ಕಡೆ ಜೆಡಿಎಸ್ ಬೆಂಬಲ ಕೋರಿದ್ದಾರೆ ಎಂದಿದ್ದಾರೆ.

ಇದೆ ವೇಳೆ ಮುಂದಿನ ವಿಧಾನಸಭೆ ಚುನಾವಣೆ ಗುರಿಯಾಗಿರಿಸಿಕೊಂಡು 123 ಸ್ಥಾನಗಳ ನಮ್ಮ ಗುರಿಯನ್ನು ರೀಚ್ ಆಗುವ ನಿಟ್ಟಿನಲ್ಲಿ ನಮ್ಮ ಪಕ್ಷದ ಮುಖಂಡರ ಜೊತೆ ಅವರ ಮಾಹಿತಿ ಸಲಹೆ ಪಡೆದು ಬೆಂಬಲ ಕೊಡುವ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *