ಬೆಂಗಳೂರು: ಕಲಾಪ ಆರಂಭವಾಗಿದೆ. ಇದಕ್ಕೂ ಮುನ್ನ ಶಾಸಕ ಶಿವಲಿಂಗೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ಮಾತಿನ ಚಕಮಕಿ ನಡೆದಿದೆ. ಶಾಸಕ ಶಿವಲಿಂಗೇಗೌಡ ವಿಧಾನಸೌಧದಲ್ಲಿ ಮಾತನಾಡಿ, ಸಿಎಂ ಗೃಹಕಚೇರಿಯಲ್ಲಿ ಲಂಚ ಸ್ವೀಕರಿಸುವ ಆರೋಪದಲ್ಲಿ ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡಬಾರದು. ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಬಾಯಿಗೆ ಬಂದಂತೆ ಮಾತನಾಡಬಾರದು. ತಾಕತ್ ಇದ್ದರೆ ಅಕ್ರಮದ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಈ ಮಾತಿಗೆ ವಿಧಾನಸೌಧದಲ್ಲಿಯೇ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ನನ್ನ ತಾಕತ್ ಇರ್ಲಿ, ನಿಮ್ಗೆ ಧಮ್ ಇದ್ಯಾ. ಒಂದೇ ತಿಂಗಳಲ್ಲಿ ಕಾಂಗ್ರೆಸ್ ನವರು ಹಗಲು ದರೋಡೆ ಮಾಡೋದಕ್ಕೆ ಹೊರಟಿದ್ದೀರಿ. ಬೀದಿಯಲ್ಲೇ ಜನ ಮಾತನಾಡುತ್ತಿದ್ದಾರೆ. ನಿಮ್ಮ ಕೈಯಲ್ಲಿ ದಾಖಲೆ ಕೊಡೋದಕ್ಕೆ ತಾಕತ್ತಿಲ್ಲ. ಆದರೆ ಕುಮಾರಸ್ವಾಮಿ, ಜನತಾದಳಕ್ಕೆ ಇನ್ನೂ ತಾಕತ್ತಿದೆ. ದಾಖಲೆ ಬಿಡುಗಡೆ ಮಾಡೋದಕ್ಕೆ ಟೈಮ್ ಬರುತ್ತೆ. ಆಗ ದಾಖಲೆ ಬಿಡುಗಡೆ ಮಾಡಿ ಅನ್ನೋರ ಆಸೆ ನೆರವೇರಿಸಿ ಕೊಡುತ್ತೇನೆ.
ದಾಖಲೆ ಕೊಟ್ಟಾಗ ಯಾವ ಇಲಾಖೆಯಲ್ಲಿ ಯಾವ ಮಂತ್ರಿಯ ಸುಪರ್ದಿಯಲ್ಲಿ ನಡೆದಿದೆ ಅನ್ನೋದನ್ನ ಹೇಳ್ತೀನಿ. ಆ ಮಂತ್ರಿ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ತು ನಿಮಗೆ ಇದ್ಯಾ ಎಂದು ಪ್ರಶ್ನಿಸುವ ಮೂಲಕ ಸವಾಲು ಹಾಕಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
























