Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾಕತ್ತಿನ ಬಗ್ಗೆ ಮಾತನಾಡಿದ ಶಿವಲಿಂಗೇಗೌಡರಿಗೆ ನಿಮ್ಗೆ ಧಮ್ ಇದ್ಯಾ ಎಂದ ಕುಮಾರಸ್ವಾಮಿ..?

Facebook
Twitter
Telegram
WhatsApp

 

ಬೆಂಗಳೂರು: ಕಲಾಪ ಆರಂಭವಾಗಿದೆ. ಇದಕ್ಕೂ ಮುನ್ನ ಶಾಸಕ ಶಿವಲಿಂಗೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ಮಾತಿನ ಚಕಮಕಿ ನಡೆದಿದೆ. ಶಾಸಕ ಶಿವಲಿಂಗೇಗೌಡ ವಿಧಾನಸೌಧದಲ್ಲಿ ಮಾತನಾಡಿ, ಸಿಎಂ ಗೃಹಕಚೇರಿಯಲ್ಲಿ ಲಂಚ ಸ್ವೀಕರಿಸುವ ಆರೋಪದಲ್ಲಿ ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡಬಾರದು. ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಬಾಯಿಗೆ ಬಂದಂತೆ ಮಾತನಾಡಬಾರದು. ತಾಕತ್ ಇದ್ದರೆ ಅಕ್ರಮದ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಈ ಮಾತಿಗೆ ವಿಧಾನಸೌಧದಲ್ಲಿಯೇ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ನನ್ನ ತಾಕತ್ ಇರ್ಲಿ, ನಿಮ್ಗೆ ಧಮ್ ಇದ್ಯಾ. ಒಂದೇ ತಿಂಗಳಲ್ಲಿ ಕಾಂಗ್ರೆಸ್ ನವರು ಹಗಲು ದರೋಡೆ ಮಾಡೋದಕ್ಕೆ ಹೊರಟಿದ್ದೀರಿ. ಬೀದಿಯಲ್ಲೇ ಜನ ಮಾತನಾಡುತ್ತಿದ್ದಾರೆ. ನಿಮ್ಮ ಕೈಯಲ್ಲಿ ದಾಖಲೆ ಕೊಡೋದಕ್ಕೆ ತಾಕತ್ತಿಲ್ಲ. ಆದರೆ ಕುಮಾರಸ್ವಾಮಿ, ಜನತಾದಳಕ್ಕೆ ಇನ್ನೂ ತಾಕತ್ತಿದೆ. ದಾಖಲೆ ಬಿಡುಗಡೆ ಮಾಡೋದಕ್ಕೆ ಟೈಮ್ ಬರುತ್ತೆ. ಆಗ ದಾಖಲೆ ಬಿಡುಗಡೆ ಮಾಡಿ ಅನ್ನೋರ ಆಸೆ ನೆರವೇರಿಸಿ ಕೊಡುತ್ತೇನೆ.

ದಾಖಲೆ ಕೊಟ್ಟಾಗ ಯಾವ ಇಲಾಖೆಯಲ್ಲಿ ಯಾವ ಮಂತ್ರಿಯ ಸುಪರ್ದಿಯಲ್ಲಿ ನಡೆದಿದೆ ಅನ್ನೋದನ್ನ ಹೇಳ್ತೀನಿ. ಆ ಮಂತ್ರಿ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ತು ನಿಮಗೆ ಇದ್ಯಾ ಎಂದು ಪ್ರಶ್ನಿಸುವ ಮೂಲಕ ಸವಾಲು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!