ಬೆಂಗಳೂರು: ಕಲಾಪ ಆರಂಭವಾಗಿದೆ. ಇದಕ್ಕೂ ಮುನ್ನ ಶಾಸಕ ಶಿವಲಿಂಗೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ನಡುವೆ ಮಾತಿನ ಚಕಮಕಿ ನಡೆದಿದೆ. ಶಾಸಕ ಶಿವಲಿಂಗೇಗೌಡ ವಿಧಾನಸೌಧದಲ್ಲಿ ಮಾತನಾಡಿ, ಸಿಎಂ ಗೃಹಕಚೇರಿಯಲ್ಲಿ ಲಂಚ ಸ್ವೀಕರಿಸುವ ಆರೋಪದಲ್ಲಿ ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡಬಾರದು. ಯಾವುದಾದರೂ ದಾಖಲೆ ಇದ್ದರೆ ಬಿಡುಗಡೆ ಮಾಡಲಿ. ಬಾಯಿಗೆ ಬಂದಂತೆ ಮಾತನಾಡಬಾರದು. ತಾಕತ್ ಇದ್ದರೆ ಅಕ್ರಮದ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
ಈ ಮಾತಿಗೆ ವಿಧಾನಸೌಧದಲ್ಲಿಯೇ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ, ನನ್ನ ತಾಕತ್ ಇರ್ಲಿ, ನಿಮ್ಗೆ ಧಮ್ ಇದ್ಯಾ. ಒಂದೇ ತಿಂಗಳಲ್ಲಿ ಕಾಂಗ್ರೆಸ್ ನವರು ಹಗಲು ದರೋಡೆ ಮಾಡೋದಕ್ಕೆ ಹೊರಟಿದ್ದೀರಿ. ಬೀದಿಯಲ್ಲೇ ಜನ ಮಾತನಾಡುತ್ತಿದ್ದಾರೆ. ನಿಮ್ಮ ಕೈಯಲ್ಲಿ ದಾಖಲೆ ಕೊಡೋದಕ್ಕೆ ತಾಕತ್ತಿಲ್ಲ. ಆದರೆ ಕುಮಾರಸ್ವಾಮಿ, ಜನತಾದಳಕ್ಕೆ ಇನ್ನೂ ತಾಕತ್ತಿದೆ. ದಾಖಲೆ ಬಿಡುಗಡೆ ಮಾಡೋದಕ್ಕೆ ಟೈಮ್ ಬರುತ್ತೆ. ಆಗ ದಾಖಲೆ ಬಿಡುಗಡೆ ಮಾಡಿ ಅನ್ನೋರ ಆಸೆ ನೆರವೇರಿಸಿ ಕೊಡುತ್ತೇನೆ.
ದಾಖಲೆ ಕೊಟ್ಟಾಗ ಯಾವ ಇಲಾಖೆಯಲ್ಲಿ ಯಾವ ಮಂತ್ರಿಯ ಸುಪರ್ದಿಯಲ್ಲಿ ನಡೆದಿದೆ ಅನ್ನೋದನ್ನ ಹೇಳ್ತೀನಿ. ಆ ಮಂತ್ರಿ ವಿರುದ್ಧ ಕ್ರಮ ಕೈಗೊಳ್ಳುವ ತಾಕತ್ತು ನಿಮಗೆ ಇದ್ಯಾ ಎಂದು ಪ್ರಶ್ನಿಸುವ ಮೂಲಕ ಸವಾಲು ಹಾಕಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…