ವಿಜಯನಗರ : ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕೇವಲ ಸಿದ್ಧರಾಮಯ್ಯ ವಿರೋಧಿ ಮಾತ್ರವಲ್ಲ, ಮುಸ್ಲಿಂ ಸಮುದಾಯದ ವಿರೋಧಿಯೂ ಹೌದು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಆರೋಪಿಸಿದ್ದಾರೆ.
ವಿಜಯಪುರ ಜಿಲ್ಲೆಯ ಮಾತನಾಡಿದ ಅವರು, ಕುಮಾರಸ್ವಾಮಿಗೆ ಅಲ್ಪ ಸಂಖ್ಯಾತರನ್ನು ಬಲಿ ಆಗಿಸುವುದೊಂದೇ ಟಾರ್ಗೆಟ್ ಆಗಿದೆ. ಮುಸ್ಲಿಮರನ್ನು ಮುಗಿಸುವುದು ಅವರ ದುರುದ್ದೇಶವಾಗಿದೆ .ಅಲ್ಪ ಸಂಖ್ಯಾತರ ಜೊತೆಯಲ್ಲೇ ಸಿದ್ದರಾಮಯ್ಯ ಅವರನ್ನೂ ಕುಮಾರಸ್ವಾಮಿ ಟಾರ್ಗೆಟ್ ಮಾಡುತ್ತಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಎಷ್ಟು ಜನ ಮುಸ್ಲಿಮರನ್ನು ಎಂ ಎಲ್ ಎ ಮಾಡಿದ್ದಾರೆ..? ಎಷ್ಟು ಅಲ್ಪ ಸಂಖ್ಯಾತರನ್ನು ಮಂತ್ರಿ ಮಾಡಿದ್ದಾರೆ? ಇದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಕಿಡಿ ಕಾರಿದರು.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಾರ್ವತ್ರಿಕ ಚುನಾವಣೆಯಲ್ಲಿ ಯಾಕೆ ಮುಸ್ಲಿಂ ಅಭ್ಯರ್ಥಿಯನ್ನು ಹಾಕುವುದಿಲ್ಲ ಎಂದು ಪ್ರಶ್ನಿಸಿದ ಜಮೀರ್, ಉಪ ಚುನಾವಣೆಯಲ್ಲಿ ಮಾತ್ರ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾರಣವೇನು ಎಂದು ಕೇಳಿದರು.
ನಾನು ಕುಮಾರಸ್ವಾಮಿ ಅವರಿಗೆ ಬಹಳ ಆತ್ಮಿಯನಾಗಿದ್ದೆ. ಆದರೂ ನನಗೆ ಕೇವಲ ವಕ್ಫ್ ಮತ್ತು ಹಜ್ ಖಾತೆ ನೀಡಿದರು. ಈಗ ಹಾನಗಲ್ನಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ. ಈ ಹಿಂದೆ ಬಸವ ಕಲ್ಯಾಣದಲ್ಲೂ ಮುಸ್ಲಿಂ ಅಭ್ಯರ್ಥಿ ಹಾಕಿದ್ದರು. ಅಲ್ಲಿ ಜೆಡಿಎಸ್ಗೆ ಸುಮಾರು 11 ಸಾವಿರ ಮತಗಳು ಬಂದಿದ್ದವು. ಆ ಮತಗಳು ಎಚ್. ಡಿ. ಕುಮಾರಸ್ವಾಮಿ ಅವರಿಂದ ಬಂದಿಲ್ಲ. ಬದಲಾಗಿ, ಜೆಡಿಎಸ್ ಅಭ್ಯರ್ಥಿಯಾಗಿದ್ದ ದರ್ಗಾವೊಂದರ ಪೀಠಾಧಿಪತಿಗಳ ವೈಯಕ್ತಿಕ ವರ್ಚಸ್ಸಿನಿಂದ ವೋಟುಗಳು ಬಂದಿದ್ದವು ಎಂದು ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…