Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತ್ತೊಮ್ಮೆ ಚರ್ಚೆಯಲ್ಲಿದ್ದಾರೆ ಕುಮಾರಸ್ವಾಮಿ-ಸುಮಲತಾ : ಈ ಬಾರಿ ಶುರುವಾಗಿರೋದು ಕಾರು ವಾರ್..!

---Advertisement---

ಮಂಡ್ಯ: ಚುನಾವಣಾ ವಿಚಾರದಲ್ಲಿ ಕುಮಾರಸ್ವಾಮಿ ಹಾಗೂ ಸುಮಲತಾ ಬದ್ಧ ವೈರಿಗಳೇ ಸರಿ. 2019 ಅದರಲ್ಲಿ ಲೋಕಸಭಾ ಚುನಾವಣೆಯಲ್ಲಿ ಜಿದ್ದಾಜಿದ್ದಿಯ ಕಣವಾಗಿದ್ದ ಮಂಡ್ಯದಲ್ಲಿ ಸುಮಲತಾ ಗೆದ್ದಿದ್ದರು. ಆದರೆ 2024ರ ಚುನಾವಣಾ ವೇಳೆಗೆ ಬಿಜೆಪಿ ಸೇರಿ ಟಿಕೆಟ್ ಇಲ್ಲದೆ ಖಾಲಿ ಕೈನಲ್ಲಿ ಕೂತರು. ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಕುಮಾರಸ್ವಾಮಿ ಗೆದ್ದು ಸಂಸದರಾಗಿದ್ದಾರೆ. ಸಂಸದರಾದವರಿಗೆ ಸರ್ಕಾರದಿಂದ ಕಾರು ಕೊಡಬೇಕಾಗಿದೆ. ಆದರೆ ಸರ್ಕಾರ ಕೊಡುವ ಕಾರನ್ನ ಕುಮಾರಸ್ವಾಮಿ ಮುಟ್ಟಿಲ್ಲ. ಯಾಕಂದ್ರೆ ಅದು ಸುಮಲತಾ ಬಳಸಿ ಬಿಟ್ಟಿರುವ ಕಾರಾಗಿದೆ.

ಈ ಸಂಬಂಧ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ, ಈ ಹಿಂದೆ ಸುಮಲತಾ ಗೆದ್ದು ಸಂಸದರಾಗಿದ್ದರು. ಅವರಿಗೆ ಸರ್ಕಾರದಿಂದ ಕಾರನ್ನು ನೀಡಲಾಗಿತ್ತು. ಈಗ ಕುಮಾರಸ್ವಾಮಿ ಅವರು ಸಂದರಾಗಿದ್ದಾರೆ. ವಾಡಿಕೆಯಂತೆ ಈ ಹಿಂದೆ ಸಂಸದರಾಗಿದ್ದ ಕಾರನ್ನೇ ಹೊಸ ಸಂಸದರಿಗೂ ನೀಡುತ್ತಾರೆ. ಆದರೆ ಕುಮಾರಸ್ವಾಮಿ ಅವರು ಆ ಕಾರನ್ನು ನಿರಾಕರಿಸಿದ್ದಾರೆ. ಸುಮಲತಾ ಬಳಸುತ್ತಿದ್ದ ಕಾರು ನನಗೆ ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇದಕ್ಕೆ ನಾವೇನು ಮಾಡಲು ಸಾಧ್ಯ..?

ಸುಮಲತಾ ಅವರು ಬಳಸುತ್ತಿದ್ದ ಕಾರನ್ನು ಕುಮಾರಸ್ವಾಮಿ ಅವರು ಬೇಡ ಎಂದದ್ದು ಏಕೆ ಎಂಬುದು ಗೊತ್ತಿಲ್ಲ. ನಾವೇನು ಕಾರನ್ನು ಕೊಡುವುದಿಲ್ಲ ಎಂದು ಹೇಳಿಲ್ಲ. ಆದರೆ ಕಾರು ಬೇಡ ಎಂದಿರೋದು ಅವರೆ. ನಮಗೂ ಕೂಡ ಈ ಹಿಂದಿನ ಸಚಿವರು ಬಳಸುತ್ತಿದ್ದ ಕಾರನ್ನೇ ನೀಡಿರುವುದು. ನಾನು ಅದನ್ನೇ ಬಳಸುತ್ತಿರುವುದು. ಈ ಹಿಂದೆ ನಾನು ಸಂಸದನಾದಾಗ ಅಂವರೀಶ್ ಅವರು ಬಳಸುತ್ತಿದ್ದ ಕಾರನ್ನೇ ನೀಡಿದರು. ಆಮೇಲೆ ನನಗೆ ಹೊಸ ಕಾರು ಕೊಟ್ಟದ್ದು ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment