ದೇವೇಗೌಡರ ಹಾಗೂ ಜೆಡಿಎಸ್ ಬಗ್ಗೆ ಟೀಕಿಸಿದ್ದ ಅಮಿತ್ ಶಾ ಮಾತಿಗೆ ನಾನು ಆಭಾರಿ ಎಂದಿದ್ಯಾಕೆ ಕುಮಾರಸ್ವಾಮಿ..!

ಬೆಂಗಳೂರು: ಕಳೆದ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜೆಡಿಎಸ್ ಹಾಗೂ ದೇವೇಗೌಡರ ಬಗ್ಗೆ ಕಿಡಿಕಾರಿದ್ದರು. ಪ್ರಧಾನಿಯಾಗಿದ್ದವರು, ಮುಖ್ಯಮಂತ್ರಿಯಾಗಿದ್ದವರು, ಆದರೆ ರಾಜ್ಯಕ್ಕೆ ಏನು ಮಾಡಿಲ್ಲ ಎಂದಿದ್ದರು. ಜೊತೆಗೆ 35 ಕ್ಷೇತ್ರಗಳಿಗಷ್ಟೇ ಸೀಮಿತ ಅಂತ ಕೂಡ ಹೇಳಿದ್ದರು. ಇದೀಗ ಅಮಿತ್ ಶಾ ಅವರ ಮಾತಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ನಮ್ಮ ವಿರೋಧಿಗಳು ಹೇಳ್ತಾರೆ ಹಳೇ ಮೈಸೂರು ಭಾಗ ಬಿಟ್ಟರೆ ಉತ್ತರ ಕರ್ನಾಟಕದಲ್ಲಿ ಬರುವುದಿಲ್ಲ ಅಂತಾರೆ. ಆದರೆ ಆ ಭಾಗದಲ್ಲಿ ಕನಿಷ್ಟ 35 ಸೀಟು ಸ್ಥಾನ ಗೆಲ್ಲುವ ಪ್ರಯತ್ನ ಮಾಡುತ್ತೇವೆ. ನಾವೂ ನಮ್ಮ ವಿಚಾರವನ್ನು ಇಟ್ಟುಕೊಂಡೇ ಜನರ ಬಳಿಗೆ ಹೋಗುತ್ತೇವೆ. ಈ ಐದು ಕಾರ್ಯಕ್ರಮ ಮಾತ್ರ ಜನರ ಮುಂದೆ ಇಡುತ್ತೇವೆ. ಯಾರ ಬಗ್ಗೆಯೂ ವೈಯಕ್ತಿಕ ಟೀಕೆ ಮಾಡುವುದಿಲ್ಲ. ಅಮಿತ್ ಶಾ ಅವರು ಬಂದು ನಮ್ಮ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ಬಗ್ಗೆ ಟೀಕೆ ಮಾಡಿದ್ದಾರೆ.

ಸ್ವತಂತ್ರ ಸರ್ಕಾರ ತರುವುದು ನಮ್ಮ ಗುರಿ. ಜೆಡಿಎಸ್ ಪಕ್ಷವನ್ನು 35 ಸೀಟುಗಳಿಗೆ ಕಟ್ಟಿ ಹಾಕುತ್ತೇವೆ ಎಂದು ಹೇಳಿದ್ದಾರೆ. ಕೊನೆ ಪಕ್ಷ ನಾವೂ ಅಷ್ಟು ಸೀಟು ಗೆಲ್ಲುತ್ತೇವೆ ಎಂಬುದನ್ನು ಅಮಿತ್ ಶಾ ಅವರೇ ಹೇಳಿದ್ದಾರೆ. ಅವರಿಗೆ ನಾವೂ ಆಬಾರಿಯಾಗಿರುತ್ತೇನೆ. ಬಿಜೆಪಿ, ಕಾಂಗ್ರೆಸ್ ರೀತಿಯಲ್ಲಿ ನಾವೂ ದೊಡ್ಡಮಟ್ಟದ ಕಾರ್ಯತಂತ್ರ ರೂಪಿಸಿ ಹೋಗುತ್ತಿಲ್ಲ. ಪಂಚರತ್ನ ನಮ್ಮ ಕಾರ್ಯಕ್ರಮ ಮಾತ್ರ. ಅದನ್ನೇ ಜನರಿಗೆ ತಲುಪಿಸುತ್ತೇನೆ ಎಂದಿದ್ದಾರೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

1 hour ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

3 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

3 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

3 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago