Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

KPSC ಪೂರ್ವಭಾವಿ ಪರೀಕ್ಷೆ ಮುಂದೂಡಲು ಕುಮಾರಸ್ವಾಮಿ ಮನವಿ : ಕಾರಣವೇನು..?

Facebook
Twitter
Telegram
WhatsApp

 

ಬೆಂಗಳೂರು: ಆಗಸ್ಟ್ 27ರಂದು ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈಗ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪರೀಕ್ಷೆಯನ್ನು ಮುಂದೂಡಿ ಎಂದು ಮನವಿ ಮಾಡಿದ್ದಾರೆ.

ಗೆಜೆಟೆಡ್ ಪ್ರೊಬೆಷನರ್ಸ್ 384 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಈಗಾಗಲೇ ಸಾಕಷ್ಟು ಕಡೆಯಿಂದ ಈ ಪರೀಕ್ಷೆಯನ್ನು ಮುಂದೂಡಿ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಆ ಮನವಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೂಡ ಧ್ವನಿಗೂಡಿಸಿದ್ದಾರೆ.

 

ಈ ಬಗ್ಗೆ ಟ್ವೀಟ್ ಮಾಡಿದ್ದು, ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ.

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ.

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. @INCKarnataka ಸರಕಾರ ಹಾಗೂ #KPSC ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!