Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

---Advertisement---

 

144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ ಪ್ರಯಾಗ್ ರಾಜ್ ಗೆ ಭೇಟಿ ನೀಡಿ, ಪುಣ್ಯ ಸ್ನಾನ ಮಾಡಿ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದಕ್ಕೆಂದೆ ಹೋಗುತ್ತಾರೆ. ಪ್ರಯಾಗ್ ರಾಜ್ ಗೆ ಹೋಗುವುದಕ್ಕೆ ಆಗದೆ ಇರುವವರು ಇದೀಗ ಕರ್ನಾಟಕದಲ್ಲಿಯೇ ಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡಬಹುದು.

ಹೌದು ಕರ್ನಾಟಕದ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿಯೂ ತ್ರಿವೇಣಿ ಸಂಗಮ ನದಿ ಹರಿಯುತ್ತದೆ. ಇಲ್ಲಿಯೂ ಕುಂಭಮೇಳಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಫೆಬ್ರವರಿ 10 ರಂದು ಇಲ್ಲಿ ಕುಂಭಮೇಳ ನಡೆಯಲಿದೆ. ತಲಕಾವೇರಿಯಲ್ಲಿ ಜನ್ಮ ತಾಳಿ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮವನ್ನು ಸೃಷ್ಟಿಸಿ, ಹರಿಯುವ ಕಾವೇರಿಯೂ ತಾನೂ ಹರಿದ ಕಡೆಗಳಲ್ಲೆಲ್ಲಾ ಪವಿತ್ರ ಕ್ಷೇತ್ರಗಳನ್ನು ಸೃಷ್ಟಿಸಿದ್ದು, ಅದರಲ್ಲಿ ತಿರುಮಕೂಡಲು ಒಂದಾಗಿದೆ.

ಇಲ್ಲಿಯೂ ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭಮೇಳವನ್ನು ನಡೆಸಲಾಗುತ್ತದೆ. ಕಳೆದ 11 ಕುಂಭಮೇಳವನ್ನ ತಿ.ನರಸೀಪುರದ ತಿರುಮಕೂಡಲಿನಲ್ಲಿ ನಡೆಸಲಾಗಿದೆ. ಕೋವಿಡ್ ಕಾರಣದಿಂದ 12ನೇ ಕುಂಭಮೇಳ ನಡೆದಿಲ್ಲ. ಇದೀಗ ಆರು ವರ್ಷಗಳ ಬಳಿಕ ಮತ್ತೆ ಕುಂಭಮೇಳ ನಡೆಸಲು ಎಲ್ಲಾ ತಯಾರಿ ನಡೆಸಲಾಗಿದೆ. ಇಲ್ಲಿಗೂ ಪುಣ್ಯ ಸ್ನಾನಕ್ಕಾಗಿ ಸಹಸ್ರಾರು ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ. ಹೀಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಭಕ್ತರ ಅನುಕೂಲಕ್ಕೆ ತಕ್ಕಂತೆ ತಿ.ನರಸೀಪುರದಲ್ಲಿ ಕಾವೇರಿ, ಕಪಿಲೆ ಮತ್ತು ಸ್ಟಟಿ ಸರೋವರ ಈ ಮೂರು ನದಿಗಳು ಸಂಗಮವಾಗುವ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕೆ ಅನುಕೂಲವಾಗುವಂತೆ ಮೂರು ಕಡೆ ಸ್ನಾನಘಟ್ಟದ ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಬಹುದಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...