ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

 

144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ ಪ್ರಯಾಗ್ ರಾಜ್ ಗೆ ಭೇಟಿ ನೀಡಿ, ಪುಣ್ಯ ಸ್ನಾನ ಮಾಡಿ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದಕ್ಕೆಂದೆ ಹೋಗುತ್ತಾರೆ. ಪ್ರಯಾಗ್ ರಾಜ್ ಗೆ ಹೋಗುವುದಕ್ಕೆ ಆಗದೆ ಇರುವವರು ಇದೀಗ ಕರ್ನಾಟಕದಲ್ಲಿಯೇ ಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡಬಹುದು.

ಹೌದು ಕರ್ನಾಟಕದ ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿಯೂ ತ್ರಿವೇಣಿ ಸಂಗಮ ನದಿ ಹರಿಯುತ್ತದೆ. ಇಲ್ಲಿಯೂ ಕುಂಭಮೇಳಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ. ಫೆಬ್ರವರಿ 10 ರಂದು ಇಲ್ಲಿ ಕುಂಭಮೇಳ ನಡೆಯಲಿದೆ. ತಲಕಾವೇರಿಯಲ್ಲಿ ಜನ್ಮ ತಾಳಿ ಭಾಗಮಂಡಲದಲ್ಲಿ ತ್ರಿವೇಣಿ ಸಂಗಮವನ್ನು ಸೃಷ್ಟಿಸಿ, ಹರಿಯುವ ಕಾವೇರಿಯೂ ತಾನೂ ಹರಿದ ಕಡೆಗಳಲ್ಲೆಲ್ಲಾ ಪವಿತ್ರ ಕ್ಷೇತ್ರಗಳನ್ನು ಸೃಷ್ಟಿಸಿದ್ದು, ಅದರಲ್ಲಿ ತಿರುಮಕೂಡಲು ಒಂದಾಗಿದೆ.

ಇಲ್ಲಿಯೂ ಪ್ರತಿ ಮೂರು ವರ್ಷಗಳಿಗೊಮ್ಮೆ ಕುಂಭಮೇಳವನ್ನು ನಡೆಸಲಾಗುತ್ತದೆ. ಕಳೆದ 11 ಕುಂಭಮೇಳವನ್ನ ತಿ.ನರಸೀಪುರದ ತಿರುಮಕೂಡಲಿನಲ್ಲಿ ನಡೆಸಲಾಗಿದೆ. ಕೋವಿಡ್ ಕಾರಣದಿಂದ 12ನೇ ಕುಂಭಮೇಳ ನಡೆದಿಲ್ಲ. ಇದೀಗ ಆರು ವರ್ಷಗಳ ಬಳಿಕ ಮತ್ತೆ ಕುಂಭಮೇಳ ನಡೆಸಲು ಎಲ್ಲಾ ತಯಾರಿ ನಡೆಸಲಾಗಿದೆ. ಇಲ್ಲಿಗೂ ಪುಣ್ಯ ಸ್ನಾನಕ್ಕಾಗಿ ಸಹಸ್ರಾರು ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ. ಹೀಗಾಗಿ ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಭಕ್ತರ ಅನುಕೂಲಕ್ಕೆ ತಕ್ಕಂತೆ ತಿ.ನರಸೀಪುರದಲ್ಲಿ ಕಾವೇರಿ, ಕಪಿಲೆ ಮತ್ತು ಸ್ಟಟಿ ಸರೋವರ ಈ ಮೂರು ನದಿಗಳು ಸಂಗಮವಾಗುವ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕೆ ಅನುಕೂಲವಾಗುವಂತೆ ಮೂರು ಕಡೆ ಸ್ನಾನಘಟ್ಟದ ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಬಹುದಾಗಿದೆ.

suddionenews

Recent Posts

ಧರ್ಮಪುರ ಹಾಲು ಉತ್ಪಾದಕ ಸಹಕಾರ ಸಂಘ ಅತ್ಯುತ್ತಮ ಕಾರ್ಯ ನಿರ್ವಹಣೆ : ಬಿಸಿ ಸಂಜೀವ ಮೂರ್ತಿ ಮೆಚ್ಚುಗೆ

ಹಿರಿಯೂರು : ಜಿಲ್ಲೆಯಲ್ಲಿಯೇ ಧರ್ಮಪುರ ಹಾಲು ಉತ್ಪಾದಕ ಸಹಕಾರ ಸಂಘ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಶಿಮುಲ್ ನಿರ್ದೇಶಕ ಬಿಸಿ…

4 hours ago

ಡಾ. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡದ ಕಾಂಗ್ರೆಸ್ ಇಂದು ಜೈ ಭೀಮ್ ಎನ್ನುತ್ತಿದೆ : ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ

  ಸುದ್ದಿಒನ್ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ…

5 hours ago

ಚಿತ್ರದುರ್ಗಕ್ಕೆ ಆಗಮಿಸಿದ ಕರ್ನಾಟಕ ಶ್ರಮಿಕ್ ಸಮ್ಮಾನ್ ಯಾತ್ರೆ : ಫೆ.25 ರಂದು ನವದೆಹಲಿಯಲ್ಲಿ ಬೃಹತ್ ಸಮಾವೇಶ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

6 hours ago

ಫೆಬ್ರವರಿ 08 ರಂದು ಶ್ರೀ ಜೋಳ ಸಿದ್ದಿವಿನಾಯಕ ದೇವಾಲಯ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 06 :…

6 hours ago

ಟಿಬಿ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ : ಡಾ.ಕಾವ್ಯ

ಚಿತ್ರದುರ್ಗ. ಫೆ.06: ಎಲ್ಲರೂ ಕೈಜೋಡಿಸಿ ಟಿಬಿ ಮುಕ್ತ ಸಮಾಜ ನಿರ್ಮಾಣ ಮಾಡೋಣ ಎಂದು ಕಾಸವರಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ…

6 hours ago

ಚಿತ್ರದುರ್ಗ ಜಿಲ್ಲಾಸ್ಪತ್ರೆ ಕಾರ್ಯವೈಖರಿಗೆ ಡಾ.ನಾಗಲಕ್ಷ್ಮೀ ಚೌಧರಿ ಬೇಸರ

ಚಿತ್ರದುರ್ಗ, ಫೆಬ್ರವರಿ. 06 : ಜಿಲ್ಲಾಸ್ಪತ್ರೆಯ ಕಾರ್ಯವೈಖರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಬೇಸರ ವ್ಯಕ್ತಪಡಿಸಿದರು. ನಗರದ…

6 hours ago