ಕುಂಚಿಟಿಗ ಜನಾಂಗಕ್ಕೆ ಕೇಂದ್ರ ಸರ್ಕಾರ ಓ.ಬಿ.ಸಿ. ಮೀಸಲಾತಿ ನೀಡುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಧರಣಿ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.13 : ಕುಂಚಿಟಿಗ ಜನಾಂಗಕ್ಕೆ ಕೇಂದ್ರ ಸರ್ಕಾರ ಓ.ಬಿ.ಸಿ. ಮೀಸಲಾತಿ ನೀಡುವಂತೆ ಹಿರಿಯೂರು ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ದಿ ಸಂಘದಿಂದ ಒನಕೆ ಓಬವ್ವ ವೃತ್ತದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.

ಕಳೆದ ಹನ್ನೊಂದರಂದು ಹಿರಿಯೂರಿನಿಂದ ಪಾದಯಾತ್ರೆ ಹೊರಟ ಕುಂಚಿಟಿಗ ಜನಾಂಗದವರು ಶುಕ್ರವಾರ ಚಿತ್ರದುರ್ಗಕ್ಕೆ ಆಗಮಿಸಿ ಧರಣಿ ಆರಂಭಿಸಿದರು.

ರಾಜ್ಯದ ಹದಿನೆಂಟು ಜಿಲ್ಲೆ ನಲವತ್ತೈದು ತಾಲ್ಲೂಕುಗಳಲ್ಲಿರುವ 26 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿರುವ ಕುಂಚಿಟಿಗರು ಕಳೆದ 26 ವರ್ಷಗಳಿಂದಲೂ ಸರ್ಕಾರಕ್ಕೆ ಬೇಡಿಕೆಯಿಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕುಲಶಾಸ್ತ್ರ ಅಧ್ಯಯನ ನಡೆಸಿ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಿ ಅನುಮೋದನೆಗೊಳಿಸಿದ್ದು, ಕೇಂದ್ರ ಸರ್ಕಾರಕ್ಕೆ ರವಾನಿಸಬೇಕಿದೆ ಎಂದು ಧರಣಿನಿರತರು ಒತ್ತಾಯಿಸಿದರು.

ಕುಂಚಿಟಿಗರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಹೆಚ್.ರಂಗನಾಥ, ಗೌರವಾಧ್ಯಕ್ಷ ಎಂ.ಗಿರಿಸ್ವಾಮಿ, ಉಪಾಧ್ಯಕ್ಷ ಜೋಗೇಶ್, ಸಂಘಟನಾ ಕಾರ್ಯದರ್ಶಿ ಡಿ.ಚಂದ್ರಗಿರಿ, ಸಹ ಕಾರ್ಯದರ್ಶಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವಿ.ಕುಬೇರಪ್ಪ, ಖಜಾಂಚಿ ಡಿ.ಹನುಮಂತರಾಯ ಇನ್ನು ಮುಂತಾದವರು ಧರಣಿಯಲ್ಲಿ ಭಾಗವಹಿಸಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago