Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನೂಲ್ ಬಸ್ ದುರಂತ : ಬದುಕುಳಿದ ಬೆಂಗಳೂರಿನ ನಾಲ್ವರು..!

---Advertisement---

 

ಬೆಂಗಳೂರು: ಆಂಧ್ರ ಪ್ರದೇಶದ ಕರ್ನೂಲ್ ಬಳಿ ಹೊತ್ತಿ ಉರಿದ ಬೆಂಕಿಗೆ ಇಪ್ಪತ್ತು ಜನ ಸಜೀವ ದಹನವಾಗಿದ್ದಾರೆ. ಅದೃಷ್ಟವಶಾತ್ ಒಂದಷ್ಟು ಜನ ಬದುಕುಳುದಿದ್ದಾರೆ. ಕಿಟಕಿಯಿಂದ ಹೊರಗೆ ಬಂದು, ಹಾರಿ ಹೀಗೆ ಸಾಹಸ ಮಾಡಿ ತಮ್ಮ ಜೀವನವನ್ನ ಕಾಪಾಡಿಕೊಂಡಿದ್ದಾರೆ. ಆದರೆ ಇನ್ನಷ್ಟು ಜನಕ್ಕೆ ಅದು ಸಾಧ್ಯವಾಗಿಲ್ಲ. ಇದೀಗ ಬದುಕುಳಿದವರಲ್ಲಿ ನಾಲ್ವರು ಬೆಂಗಳೂರಿನವರು ಎಂಬುದು ಗೊತ್ತಾಗಿದೆ.

ದೀಪಾವಳಿ ಹಬ್ಬಕ್ಕೆಂದು ಜನ ತಮ್ಮ ತಮ್ಮ ಊರುಗಳಿಗೆ ಹೋಗಿದ್ರು. ಮನೆಯಲ್ಲಿ ದೀಪ ಬೆಳಗಿಸಿ ಬಂದವರ ಬದುಕಲ್ಲಿ ಬಸ್ ತುಂಬಾ ಬೆಂಕಿ ಆವರಿಸಿ, ಬದುಕನ್ನೇ ಕತ್ತಲೆಯಾಗಿಸಿದೆ. ಈ ದುರಂತದಲ್ಲಿ ಅದೃಷ್ಟವೆಂಬಂತೆ ಬದುಕುಳಿದವರಲ್ಲಿ ಶಿವ, ಗ್ಲೋರಿಯಾ ಈಸ್ಟಾ, ಸ್ಯಾಮ್, ಚರಿತ್ ಮತ್ತು ಮಹಮ್ಮದ್ ಖಾಜಿರ್ ಬದುಕುಳಿದವರಾಗಿದ್ದಾರೆ. ಇವರೆಲ್ಲ ಬೆಂಗಳೂರಿನವರೇ ಆಗಿದ್ದು, ರಜೆಗೆ ಆಂಧ್ರಕ್ಕೆ ಹೋಗಿದ್ದವರಾಗಿದ್ದಾರೆ.

ರಾತ್ರಿಯ ಪ್ರಯಾಣವಾಗಿದ್ದ ಕಾರಣ ಸಹಜವಾಗಿಯೇ ಎಲ್ಲರೂ ನಿದ್ದೆಗೆ ಜಾರಿರುತ್ತಾರೆ. ಹೀಗಾಗಿ ಈ ಅನಾಹುತದ ತೀವ್ರತೆ ಸ್ವಲ್ಪ ಜಾಸ್ತಿಯೇ ಆಗಿದೆ. ಎಲ್ಲರೂ ನಿದ್ದೆಯಲ್ಲಿರುವಾಗ ಬಸ್ ಗೆ ಬೆಂಕಿ ತಾಗಿದೆ. ತಕ್ಷಣ ಕೆಲವರಿಗೆ ಎಚ್ಚರವಾಗಿದೆ. ಹಾಗೇ ಎಚ್ಚರವಾದವರಿಗೆ ಬೆಂಕಿ ಹೊತ್ತಿಕೊಂಡದ್ದು ಗಮನಕ್ಕೆ ಬಂದು, ತಕ್ಷಣ ಎಮರ್ಜೆನ್ಸಿ ಎಕ್ಸಿಟ್ ಗಳಿಂದ ಹೊರಕ್ಕೆ ಹಾರಿದ್ದಾರೆ. ಒಳಗೆ ಇರುವವರನ್ನು ಕೂಡ ಬದುಕಿಸುವುದಕ್ಕೆ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ. ಯಾಕಂದ್ರೆ ಬೆಂಕಿಯ ತೀವ್ರತೆ ಸಿಕ್ಕಾಪಟ್ಟೆ ಜಾಸ್ತಿಯಾಗಿತ್ತು. ಹೀಗಾಗಿಯೇ ಬದುಕುಳಿಯುವುದು ಕಷ್ಟಕರವಾಗಿದೆ. ಇನ್ನು ಪ್ರಧಾನಿ ಮೋದಿ ಅವರು ಕೂಡ ಈ ಘಟನೆಗೆ ಬೇಸರ ವ್ಯಕ್ತಪಡಿಸಿದ್ದು, ಪರಿಹಾರವನ್ನು ಘೋಷಿಸಿದ್ದಾರೆ. ಘಟನೆಯಲ್ಲಿ ಬಚಾವ್ ಆದವರಿಗೆ ಚಿಕಿತ್ಸೆಯೂ ಮುಂದುವರೆದಿದೆ. ಬೆಂಗಳೂರಿನವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now