Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುವೆಂಪುರವರ ಮೌಲ್ಯಗಳನ್ನು ಎತ್ತಿಹಿಡಿಯಬೇಕು : ಡಾ.ಕೆ.ಮರುಳಸಿದ್ದಪ್ಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 08 : ಹೊರ ಜಗತ್ತಿನ ಜ್ಞಾನದ ಬೆಳಕು ಕನ್ನಡದ ಮನೆಗೆ ಹರಿಯಬೇಕೆಂದು ಖ್ಯಾತ ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ವತಿಯಿಂದ ತ.ರಾ.ಸು.ರಂಗಮಂದಿರದಲ್ಲಿ ಶನಿವಾರ ನಡೆದ 2023-24 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ 2022 ಹಾಗೂ 23 ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂತಹ ಸಮಾರಂಭಗಳು ನಾಡಿನಾದ್ಯಂತ ಎಲ್ಲಾ ಕಡೆ ನಡೆಯಬೇಕು. ಕೇವಲ ಬೆಂಗಳೂರಿಗಷ್ಟೆ ಸೀಮಿತವಾಗಿದೆ ಎನ್ನುವ ತಪ್ಪು ಕಲ್ಪನೆ ಮೂಡಬಾರದು. ಯಾವುದೇ ಒಂದು ಭಾಷೆಯ ಅನುವಾದದ ಕೃತಿಯನ್ನು ಓದಿದರೆ ಮೂಲ ಕೃತಿಗಿಂತ ಅದ್ಬುತವಾಗಿದೆ ಎನ್ನುವ ರೀತಿಯಲ್ಲಿರಬೇಕು. ಅನುವಾದದ ಮೂಲಕ ಕನ್ನಡ ಭಾಷೆ ಸಮೃದ್ದವಾಗಿದೆ. ಹೊಸಗನ್ನಡ ಸಾಹಿತ್ಯ ಅನುವಾದಗಳಿಂದ ಹುಟ್ಟಿದೆ ಎಂದರು.

ಬೇರೆ ಭಾಷೆಗಳ ಪ್ರಭಾವದಿಂದ ರಾಜ್ಯ ಸರ್ಕಾರ ಅಕಾಡೆಮಿ ರಚಿಸಿತ್ತು. ಅನುವಾದಕ್ಕೆ ಪ್ರೋತ್ಸಾಹ ಬೇಕು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರವೆಂಬ ಹೆಸರಿಟ್ಟುಕೊಂಡರೆ ಸಾಲದು. ಕುವೆಂಪುರವರ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ಹಿಂದಿ, ಇಂಗ್ಲಿಷ್, ಮರಾಠಿ, ತಮಿಳಿನಲ್ಲಿ ಕೃತಿಗಳು ಕನ್ನಡಕ್ಕೆ ಅನುವಾದವಾಗಬೇಕು. ಕನ್ನಡದಿಂದ ಬೇರೆ ಭಾಷೆಗೆ ಅನುವಾದವಾದ ಕೃತಿಗಳಿಗೆ ಮಾರುಕಟ್ಟೆಯಿಲ್ಲದಂತಾಗಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಡಿಜಿಟಲ್ ಮೂಲಕ ಭಾರತೀಯ ಭಾಷೆಗಳಿಗೆ ಕನ್ನಡದ ಶ್ರೇಷ್ಟ ಕೃತಿಗಳನ್ನು ಅನುವಾದಗೊಳಿಸಬಹುದು. ಎಲ್ಲಾ ಸರ್ಕಾರಗಳು ಅಕಾಡೆಮಿಗೆ, ಸಂಸ್ಕøತಿ ಇಲಾಖೆಗೆ ಉದಾರವಾಗಿ ನೆರವು ನೀಡುತ್ತ ಬರುತ್ತಿವೆ. ಹೊಸ ಅಕಾಡೆಮಿ ರಚನೆಯಾಗುವವರೆಗೂ ಹಳೆ ಅಕಾಡೆಮಿಗೆ ಕೆಲಸ ಮಾಡುವ ಅಧಿಕಾರವನ್ನು ಸರ್ಕಾರ ನೀಡಬೇಕು. ಸರ್ಕಾರಕ್ಕೆ ಅಕಾಡೆಮಿಯನ್ನು ಯಾವ ರೀತಿ ನಡೆಸಿಕೊಳ್ಳಬೇಕೆಂಬ ಜವಾಬ್ದಾರಿಯಿದೆ ಎಂದು ತಿಳಿಸಿದರು.

2023 ನೇ ಸಾಲಿನ ಗೌರವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರೊ.ಎಚ್.ಎಸ್.ರಾಘವೇಂದ್ರರಾವ್ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪ, ಹುಲ್ಲೂರು ಶ್ರೀನಿವಾಸ ಜೋಯಿಸ್, ತ.ರಾ.ಸು. ಇವರುಗಳನ್ನು ನಾನು ನೆನಪಿಸಿಕೊಳ್ಳಲೇಬೇಕು. ಸಾಹಿತಿ ಬಿ.ಎಲ್.ವೇಣುರವರ ಬರವಣಿಗೆ ಇನ್ನು ನೆನಪಿನಲ್ಲಿ ಉಳಿದಿದೆ. ಸಿರಿಗೆರೆ ನನಗೆ ಸಮಾನತೆ, ಜಾತ್ಯತೀತತೆಯನ್ನು ಕಲಿಸಿದೆ. ಕುವೆಂಪು ಕಂಡ ಕನಸು ವಿಶ್ವಮಾನವ ಪರಿಕಲ್ಪನೆ ನನಸು ಮಾಡಲು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹೊರಟಿದೆ ಎಂದು ಶ್ಲಾಘಿಸಿದರು.

ಜಾಗತಿಕರಣದಿಂದ ಅನೇಕ ಅಪಾಯಗಳನ್ನು ಎದುರಿಸುವಂತಾಗಿದೆ. ಶೋಷಣೆಗೆ ಗೋಡೆಗಳಿಲ್ಲ. ಅನುವಾದದ ಮೂಲಕ ಕನ್ನಡ ಕಟ್ಟುವ ಕೆಲಸವಾಗುತ್ತಿದೆ. ಕನ್ನಡದ ಸಂಸ್ಕøತಿ ಒಳಗೊಳ್ಳುವುದು, ಹೊರಗೆಡವುವುದಲ್ಲ. ಗಾಂಧಿ, ಅಂಬೇಡ್ಕರ್, ನ್ಯೂಟನ್, ಐನ್‍ಸ್ಟೈನ್ ಇವರುಗಳು ಕನ್ನಡಕ್ಕೆ ಬಂದಿರುವುದು ಬೇರೆ ಭಾಷೆಗಳಿಂದ. ಓದುಗರು ಕಡಿಮೆಯಾಗಿದ್ದಾರೆನ್ನುವುದು ಎಲ್ಲರ ಅಭಿಪ್ರಾಯ. ಆದರೆ ನಿಜವಾಗಿಯೂ ಒದುಗರು ಕಡಿಮೆಯಾಗಿಲ್ಲ. ಬೇರೆ ಬೇರೆ ವಿಧಾನಗಳಲ್ಲಿ ಓದುತ್ತಾರೆಂದರು.

ಡಾ.ಆರ್.ಕೆ.ಕುಲಕರ್ಣಿ 2024 ನೇ ಸಾಲಿನ ಗೌರವ ಪ್ರಶಸ್ತಿ ಸ್ವೀಕರಿಸಿ ಮಾತನಾಡುತ್ತ ಅನುವಾದ ಸಾಹಿತ್ಯಕ್ಕೆ ಸೃಜನ ಸಾಹಿತ್ಯದಷ್ಟೆ ಮಹತ್ವವಿದೆ. ಅನುವಾದ ಸಾಹಿತ್ಯ ಸಾಕಷ್ಟು ಬೆಳೆದಿದೆಯಾದರೂ ಇನ್ನು ಬೆಳೆಯಬೇಕಿದೆ. ಕನ್ನಡದ ವೈಭವವನ್ನು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಎತ್ತಿಹಿಡಿಯುವ ಕೆಲಸ ಮಾಡುತ್ತಿದೆ ಎಂದು ಗುಣಗಾನ ಮಾಡಿದರು.

2023 ನೇ ಸಾಲಿನ ಗೌರವ ಪ್ರಶಸ್ತಿ ಪುರಸ್ಕøತೆ ಡಾ.ದು.ಸರಸ್ವತಿ ಮಾತನಾಡಿ ಅನುವಾದ ಎನ್ನುವುದು ಕಲಿಕೆಯ ಪ್ರಕ್ರಿಯೆ. ಅಷ್ಟೊಂದು ಸುಲಭವಾದುದಲ್ಲ. ಭಾರತ ಅಂದರೆ ಬಹುತ್ವ, ಸಮಾನತೆ, ಸಹಬಾಳ್ವೆಗೆ ಹೆಸರಾದುದು. ಹಲವಾರು ಕೃತಿಗಳು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದಿಂದ ಹೊರಬರಬೇಕೆಂದು ಹೇಳಿದರು.

ಗದಗದ ತೋಂಟದಾರ್ಯ ಸಿದ್ದರಾಮಸ್ವಾಮಿಗಳು ಪುಸ್ತಕ ಬಹುಮಾನ ಸ್ವೀಕರಿಸಿ ಮಾತನಾಡುತ್ತ ಒಂದು ಭಾಷೆಯಲ್ಲಿರುವುದನ್ನು ಇನ್ನೊಂದು ಭಾಷೆಗೆ ತಿಳಿಸುವುದೇ ಅನುವಾದ. ಮೂಲ ಕೃತಿ ಓದಿದಾಗ ಆಗುವಷ್ಟು ಆನಂದ ಅನುವಾದದ ಕೃತಿ ಓದಿದಾಗಲು ಸಿಗಬೇಕು. ಅನುವಾದದ ಕೆಲೆಯೇ ವಿಶಿಷ್ಟವಾದುದು. ಭಾಷೆಗಳ ವಿನಿಮಯ ಅರ್ಥಪೂರ್ಣವಾದುದು ಎಂದು ಹೇಳಿದರು.

ಬಿ.ಆರ್.ಜಯರಾಮರಾಜೆ ಅರಸ್ 2022 ನೆ ಸಾಲಿನ ಪುಸ್ತಕ ಬಹುಮಾನ ಪಡೆದು ಮಾತನಾಡಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ವಿಶಿಷ್ಟವಾದ ಸಂಸ್ಥೆ. ಪೆರಿಯಾರ್ pಸಾವಿತ್ರಿಬಾಯಿಪುಲೆ ಇವರುಗಳು ಸಮಾಜ ಸುಧಾರಕರು. ಅನುವಾದ ಬೆಳೆಯುತ್ತಿರುವುದರಿಂದ ಹೆಚ್ಚಿನ ಮಹತ್ವ ಪಡೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪಕಟ್ಟಿ, ಡಾ.ನಟರಾಜ್ ಹುಳಿಯಾರ್, ಡಾ.ರಾಜೇಂದ್ರಜೆನ್ನಿ, ಬೋಡೆ ರಿಯಾಜ್ ಅಹಮದ್, ಡಾ.ಬಸು ಬೇವಿನ ಗಿಡದ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕುವೆಂಪು

ಭಾಷಾ ಭಾರತಿ ಪ್ರಾಧಿಕಾರದ ರಿಜಿಸ್ಟ್ರಾರ್ ಈಶ್ವರ್ ಕು.ಮಿರ್ಜಿ, ಡಾ.ಜೆ.ಕರಿಯಪ್ಪ ಮಾಳಿಗೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಇವರುಗಳು ವೇದಿಕೆಯಲ್ಲಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment