Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

BBMPಗೆ ತಿಥಿ‌ಕಾರ್ಯ ಮಾಡಿದ ಕಾರ್ಮಿಕರ ಸಂಘ : ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸದ್ಯ ವಾಹನ ಸವಾರರು ಪ್ರಾಣ ಭಯದಲ್ಲೇ ಓಡಾಡುವ ರೀತಿ ಆಗಿದೆ. ಎಲ್ಲಿ ನೋಡಿದರೂ ಗುಂಡಿಗಳೇ. ಯಾವ ರಸ್ತೆಯಲ್ಲಿ ನೋಡಿದ್ರು ಗುಂಡಿಗಳದ್ದೇ ಕಾರು ಬಾರು. ಮಳೆ ಬಂದ್ರಂತು ಗುಂಡಿಗಳು ಎಲ್ಲಿ ಇದಾವೆ ಎಂಬುದೇ ಗೊತ್ತಾಗಲ್ಲ. ಈ ಗುಂಡಿಗಳನ್ನ ತಪ್ಪಿಸಲು ಹೋಗಿ ಅದೆಷ್ಟೋ ಜನ ಪ್ರಾಣ ಬಿಟ್ಟಿದ್ದಾರೆ. ಆದ್ರೂ ಬಿಬಿಎಂಪಿ ಗುಂಡಿ ಮುಚ್ಚುವ ಕಾರ್ಯಕ್ಕೆ ಕೈ ಹಾಕಿಲ್ಲ. ಈಗಾಗಿ ಇಂದು ಬಿಬಿಎಂಪಿಗೆ ತಿಥಿ ಕಾರ್ಯ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಿತ ಕಾರ್ಮಿಕರ ಒಕ್ಕೂಟ ಇಂದು ವಿನೂತನವಾಗಿ‌ ಪ್ರತಿಭಟನೆ ನಡೆಸಿದೆ. ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲೇ ಈ ಪ್ರತಿಭಟನೆ ನಡೆದಿದ್ದು, ಬಿಬಿಎಂಪಿ ಫೋಟೋಗೆ ಹಾರ ಹಾಕಿ, ವಡೆ, ಪಾಯಸ ಎಡೆ ಇಟ್ಟು, ತಲೆ ಬೋಳಿಸಿಕೊಂಡಿದ್ದಾರೆ.

ಕಳೆದ ಹನ್ನೊಂದು ದಿನದ ಹಿಂದೆ ಸುಂಕದ ಕಟ್ಟೆ ರಸ್ತೆ ಗುಂಡಿಯಲ್ಲಿ ಈ ಸಂಬಂಧ ಪ್ರತಿಭಟನೆ ಮಾಡಿದ್ದರು. ಬಿಬಿಎಂಪಿ ಬ್ಯಾನರ್ ಸುಟ್ಟು ಹಾಕಿ ಹನ್ನೊಂದು ದಿನದ ಗಡುವು ನೀಡಿದ್ದರು. ಆದರೂ ಬಿಬಿಎಂಪಿ ಕ್ಯಾರೆ ಎನ್ನದ ಕಾರಣ ಇಂದು ತಿಥಿ ಕಾರ್ಯ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!