Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆ ಬಂಕ್ ನಲ್ಲಿ ಸಿಎನ್‌ಜಿ ಗ್ಯಾಸ್ ಅಭಾವ ; ಆಟೋ ಚಾಲಕರ ಆಕ್ರೋಶ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಜನವರಿ. 03 : ನಗರದ ಬಳ್ಳಾರಿ ರಸ್ತೆಯಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಆಟೋ ಚಾಲಕರಿಗೆ ಸಿಎನ್ ಜಿ ಸಿಗದೆ ಚಾಲಕರು ಪರದಾಡುವಂತೆ ಆಗಿದೆ. ನಗರದಲ್ಲಿ ಸಿಎನ್‌ಸಿ ಪೆಟ್ರೋಲ್ ಬಂಕ್ ಒಂದೇ ಇರುವ ಕಾರಣ ಸಿ ಎನ್ ಜಿ ಸ್ಟಾಕ್ ಕಡಿಮೆ ಬರುತ್ತಿದೆ. ಇದರಿಂದ ಆಟೋ ಚಾಲಕರಿಗೆ ಸಿ ಎನ್ ಜಿ ಸಿಗದೆ ಆಟೋ ಚಾಲನೆ ಮಾಡುವುದು ಕಷ್ಟಕರವಾಗಿದೆ.

 

ಆಟೋ ಚಾಲಕರು ಫೈನಾನ್ಸ್, ಬ್ಯಾಂಕ್ ಇನ್ನಿತರ ಕಡೆ ಸಾಲ ಮಾಡಿ ಆಟೋಗಳನ್ನು ತೆಗೆದುಕೊಂಡಿದ್ದಾರೆ ನಗರದಲ್ಲಿ 15 ರಿಂದ 20 ದಿನಗಳಿಂದ ಸಿ ಎನ್ ಜಿ ಸಿಗದ ಕಾರಣ ಆಟೋ ಚಾಲನೆ ಮಾಡಲು ಆಗುತ್ತಿಲ್ಲ ಇದರಿಂದ ಆಟೋ ಚಾಲಕರ ಜೀವನ ಸಂಕಷ್ಟಕ್ಕೆ ಸಿಲುಕಿದೆ.

ಸಿ ಎನ್ ಜಿ ಸಿಗದ ಕಾರಣ ವಿದ್ಯಾರ್ಥಿಗಳನ್ನು ಶಾಲೆಗೆ ಸರಿಯಾದ ಸಮಯಕ್ಕೆ ಬಿಡಲು ಆಗುತ್ತಿಲ್ಲ ಎಂದು ಆಟೋ ಚಾಲಕರು ತಮ್ಮ ಗೋಳನ್ನು ತೋಡಿಕೊಂಡಿದ್ದಾರೆ ಪೆಟ್ರೋಲ್ ಬಂಕ್ ನಲ್ಲಿ cng ಹಾಕಿಸಲು ಗಂಟೆಗಟ್ಟಲೆ ಕ್ಯೂನಲ್ಲಿ ನಿಲ್ಲಬೇಕು. ಆದರೂ ಸಹ ಸಿಎಂಜಿ ಸಿಗುತ್ತಿಲ್ಲ ಎಂದು ಆಟೋ ಚಾಲಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಚಳ್ಳಕೆರೆ ನಗರದಲ್ಲಿ ಒಂದೇ ಸಿ ಎನ್ ಜೆ ಪಾಯಿಂಟ್ ಇರುವ ಕಾರಣ ಈ ಸಮಸ್ಯೆ ಆಗುತ್ತಿದೆ ಇನ್ನು ಬೇರೆ ಪೆಟ್ರೋಲ್ ಬಂಕ್ ಸಿ ಎನ್ ಜಿ ಬಂಕ್ ಆಗಲು ಸರ್ಕಾರ ಅನುಮತಿ ನೀಡಬೇಕು ಎಂದು ಆಟೋ ಚಾಲಕರು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಆಟೋ ಚಾಲಕರದ ಮಂಜುನಾಥ್,  ವೆಂಕಟೇಶ್, ತಿಪ್ಪೇಸ್ವಾಮಿ, ಕೊಟ್ರೇಶ್, ವೀರೇಶ್ ಹಾಗೂ ಸಾರ್ವಜನಿಕರಾದ ಪ್ರಶಾಂತ್ ನಾಯಕ್ ಮತ್ತು ಇತರರು ಸ್ಥಳದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!