Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗದಲ್ಲಿ ಜಮೀನು ವಿವಾದ : ಮಹಿಳೆ ಕೊಲೆ

Facebook
Twitter
Telegram
WhatsApp

ಚಿತ್ರದುರ್ಗ, (ಜೂ.29) : ಹೊಲಕ್ಕೆ ಹೋಗುವ ಕಾಲುದಾರಿ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಕೊನೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಮತ್ತೋಡು ಹೋಬಳಿಯ ಲಕ್ಷ್ಮಿ ದೇವರಹಳ್ಳಿ ಗ್ರಾಮದಲ್ಲಿ ಬುಧವಾರ ಇಂತಹುದೊಂದು ದಾರುಣ ಘಟನೆ ನಡೆದಿದೆ.

ಈ ಘಟನೆಯಲ್ಲಿ ಪಾಲಕ್ಷಮ್ಮ (40) ಎಂಬ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,ಆಕೆಯ ಪತಿ ಪ್ರಸನ್ನ (46) ಮಾರಣಾಂತಿಕ ಹಲ್ಲೆಗೊಳಗಾಗಿ ಎರಡು ಕೈಗಳನ್ನು ಮುರಿದುಕೊಂಡು ಗಂಭೀರವಾಗಿ ಗಾಯಗೊಂಡಿದ್ದಾನೆ.

ಗ್ರಾಮದಲ್ಲಿ ಪ್ರಸನ್ನ ಮತ್ತು ಪಾಲಾಕ್ಷಮ್ಮ ಅವರಿಗೆ ಸೇರಿದ ಕೃಷಿ ಜಮೀನಿನ ಮೂಲಕ ಮುಂದಿನ ಹೊಲದವರು ಇವರ ಹೊಲದ ಮೂಲಕ ಹಾದು ಹೋಗಬೇಕಿತ್ತು. ಈ ವಿಚಾರವಾಗಿ ರಾಜಣ್ಣ ಎಂಬುವವರೊಂದಿಗೆ ಕಳೆದ ಕೆಲವು ದಿನಗಳಿಂದ ಪದೇಪದೇ ಜಗಳವಾಗುತ್ತಿತ್ತು.  ಈ ವಿಚಾರವಾಗಿ

ಕಳೆದ ನಾಲ್ಕೈದು ತಿಂಗಳಿಂದ ಜಮೀನಿನಲ್ಲಿ ಹಾದು ಹೋಗಿರುವ ಕಾಲು ದಾರಿಯೂ ನಮಗೆ ಸೇರಿದ್ದು, ಅದರಲ್ಲಿ ಯಾರು ಓಡಾಡಕೂಡದು ಎಂದು ಪ್ರಸನ್ನ ಹಾಗೂ ಪತ್ನಿ ಪಾಲಾಕ್ಷಮ್ಮ ಪದೇ ಪದೇ ತಕರಾರು ತೆಗೆಯುತ್ತಿದ್ದರು. ಗಲಾಟೆ ದೊಡ್ಡದಾಗಿ ಪಾಲಾಕ್ಷಮ್ಮ ರಾಜಣ್ಣ ಮತ್ತು ಇತರರ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಆದರೆ ಬುಧವಾರ ಪ್ರಸನ್ನ ಹಾಗೂ ಪಾಲಾಕ್ಷಮ್ಮ ವಿವಾದಕ್ಕೆ ಕಾರಣವಾಗಿದ್ದ ಅದೇ ಕಾಲುದಾರಿಯಲ್ಲಿ ಬೇರೆಯವರು ಓಡಾಡದಂತೆ ತೆಂಗಿನ ಸಸಿ ನೀಡುತ್ತಿದ್ದರು. ಇದೇ ಸಂದರ್ಭದಲ್ಲಿ ಅಲ್ಲಿಗೆ ಬಂದ ರಾಜಣ್ಣ ಹಾಗೂ ಇನ್ನಿತರರ ನಡುವೆ ಗಲಾಟೆ ಜೋರಾಗಿದೆ. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿ ರಾಜಣ್ಣ ಮತ್ತಿತರರು ಪ್ರಸನ್ನ ಹಾಗೂ ಪಾಲಾಕ್ಷಮ್ಮ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಪಾಲಾಕ್ಷಮ್ಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಆಕೆಯ ಪತಿ ಪ್ರಸನ್ನ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಅವರು ಭೇಟಿ ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

ಪ್ರಜ್ವಲ್ ಹಾಗೂ ರೇವಣ್ಣ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಿ : ಗೀತಾ ನಂದಿನಿಗೌಡ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಗುರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ

error: Content is protected !!