ಸರ್ಕಾರಿ ನೌಕರರ ಸಮುದಾಯ ಭವನಕ್ಕೆ ಜಮೀನು ; ಭರವಸೆ ನೀಡಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್

suddionenews
1 Min Read

ಹಿರಿಯೂರು, (ಜೂ.19): ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ರವರನ್ನು ಭೇಟಿಯಾಗಿ ನೌಕರರ ಬಹುದಿನದ ಬೇಡಿಕೆಯಾದ ಸಮುದಾಯ ಭವನ ಹಾಗೂ ಕ್ರೀಡಾ ಚಟುವಟಿಕೆಗಳನ್ನು ನಡೆಸಲು ಅಗತ್ಯವಿರುವ ಜಮೀನು ಮಂಜೂರು ಮಾಡುವಂತೆ ಮನವಿ ಮಾಡಲಾಯಿತು. ಹಾಗೂ ಜಿಲ್ಲೆಯ  ನೌಕರರ ಸಮಸ್ಯೆಗಳ ಕುರಿತಾಗಿ ಚರ್ಚೆ ಮಾಡಿಲಾಯಿತು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದನೆ ನೀಡಿದ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವ ಮೂಲಕ ಸಮುದಾಯ ಭವನ ನಿರ್ಮಾಣ ಮಾಡಲು ಜಮೀನು ಮಂಜೂರು ಮಾಡಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯೂರು ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ್, ಮಾಜಿ ನಗರಸಭಾ ಅಧ್ಯಕ್ಷ ರಾದ ಚಂದ್ರಶೇಖರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಂಜುನಾಥ್ ತಾಲೂಕು ಘಟಕದ ಅಧ್ಯಕ್ಷರಾದ ಶಿವಕುಮಾರ್ ಕಾರ್ಯದರ್ಶಿಗಳಾದ ರಮೇಶ್, ಉಪಾಧ್ಯಕ್ಷರಾದ ಯಶೋಧರ, ಶಿವಾನಂದ, ಬಿ.ಕೆ.ಹನುಮಂತಪ್ಪ, ಹಾಗೂ ಸಂಘದ ಪದಾಧಿಕಾರಿಗಳು ವಿವಿಧ ಇಲಾಖೆಗಳ ಅಧಿಕಾರಿ ಮತ್ತು ನೌಕರರು ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *