Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೂಸ್ ಮಾದ ಯೋಗಿ ಅಭಿನಯದ ಬಹುನಿರೀಕ್ಷಿತ ಚಿತ್ರ ಲಂಕೆ ಸಪ್ಟೆಂಬರ್ 10 ಅಂದರೆ ಗಣೀಶ ಚತುರ್ಥಿಯ ದಿನ ತೆರೆಕಾಣಲಿದೆ.

Facebook
Twitter
Telegram
WhatsApp
ಕೊರೊನಾ ಬ್ರೇಕ್ ಬಳಿಕ ಅದ್ಧೂರಿಯಾಗಿ ತೆರೆಕಾಣುತ್ತಿರುವ ಮೊದಲ ಚಿತ್ರ  ಲಂಕೆಯಾಗಿದ್ದು,  ರಾಜ್ಯದಾದ್ಯಂತ ಸುಮಾರು  ಇನ್ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಲಂಕೆ ರಿಲೀಸ್ ಆಗಲಿದೆ.
ಲಂಕೆ ಔಟ್ ಅಂಡ್ ಔಟ್ ಕಮರ್ಶಿಯಲ್ ಪ್ಯಾಕೇಜ್ ಚಿತ್ರವಾಗಿದ್ರೂ ಸಹ  ಆಕ್ಷನ್ ಸೀನ್, ಪವರ್ ಫುಲ್ ಡೈಲಾಗ್ ಮಾತ್ರವಲ್ಲದೇ ಲವ್, ಸೆಂಟಿಮೆಂಟ್ ಎಲ್ಲವೂ ಇದ್ದು, ಬಾಕ್ಸ್ ಆಫೀಸ್ನಲ್ಲಿ ಲಂಕೆ ಕಮಾಲ್ ಮಾಡೋದು ಪಕ್ಕಾ. ಚಿತ್ರದ ಹಾಡುಗಳು ಟ್ರೈಲರ್ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹಲ್ ಚಲ್ ಎಬ್ಬಿಸಿದ್ದು, ಸಿನಿ ಪ್ರಿಯರನ್ನು ಲಂಕೆಯ ನಶೆಯಲ್ಲಿ  ತೇಲಿಸುತ್ತಿದೆ.

ನೈಜ ಘಟನೆಯನ್ನು  ಆಧಾರವಾಗಿಟ್ಟುಕೊಂಡು ಚಿತ್ರದ ಕಥೆ  ಹೆಣೆದಿರುವ ನಿರ್ದೇಶಕ  ರಾಮ್ ಪ್ರಸಾದ್ , ಲೂಸ್ ಮಾದ ಯೋಗಿ ಅವರನ್ನು ಡಿಫರೆಂಟ್ ಮ್ಯಾನರಿಸಂನಲ್ಲಿ  ತೆರೆಮೇಲೆ ತರಲು ಸಿದ್ಧರಾಗಿದ್ದಾರೆ.

ಲಂಕೆಯಲ್ಲಿ ನಟ ದಿಗ್ಗಜರ  ತಾರಾಬಳಗವೇ  ಒಂದಾಗಿದ್ದು, ಲೂಸ್ ಮಾದ ಯೋಗಿ ಅವರ ಜೊತೆ ಕೃಷಿ ತಾಪಂಡ, ಕಾವ್ಯಾ ಶೆಟ್ಟಿ, ಎಸ್ಟರ್ ನರೋನ್ಹಾ ನಾಯಕಿಯರಿಗಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ. ಇನ್ನು ಸಂಚಾರಿ ವಿಜಯ್, ಸುಚೇಂದ್ರ ಪ್ರಸಾದ್, ಶೋಬ್ ರಾಜ್, ಶರತ್ ಲೋಹಿತಾಶ್ವ, ಗಾಯಿತ್ರಿ ಜೈರಾಮ್, ಡ್ಯಾನಿ ಕುಟ್ಟಪ್ಪ ಸೇರಿದಂತೆ ಅನೇಕ ಕಲಾವಿದರು ಲಂಕೆಯಲ್ಲಿ ಬಣ್ಣ ಹಚ್ಚಿದ್ದಾರೆ.


ಅಂದಹಾಗೆ ಮಾಸ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಲಂಕೆ ಚಿತ್ರಕ್ಕೆ ನಿರ್ದೇಶಕ ರಾಮ್ ಪ್ರಸಾದ್  ಆ್ಯಕ್ಷನ್ ಕಟ್ ಹೇಳುತ್ತಿದ್ದು, ಪಟೇಲ್ ಶ್ರೀನಿವಾಸ್, ಸುರೇಖಾ ರಾಮ್ ಪ್ರಸಾದ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಹಾಡುಗಳು  ಟ್ರೈಲರ್  ಮೂಲಕವೇ  ಹೈಪ್  ಕ್ರಿಯೆಟ್ ಮಾಡಿರುವ ಲಂಕೆ ಚಿತ್ರ ಕಾಣುತ್ತಿರುವುದರಿಂದ, ಸಿನಿ ಪ್ರಿಯರನ್ನು ಮತ್ತೆ ಥಿಯೇಟರ್ ಕಡೆ  ಮುಖ ಮಾಡುತ್ತಾರೆ  ಎನ್ನುವ ವಿಶ್ವಾಸದಲ್ಲಿ ಚಿತ್ರಮಂದಿರದ ಮಾಲೀಕರು ಸಹ ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

error: Content is protected !!