ಇದೀಗ ಬಂದ ಸುದ್ದಿ : ಪಿಳ್ಳೆಕೆರೆನಹಳ್ಳಿ ಬಳಿ ರಸ್ತೆ ಅಪಘಾತ, ಇಬ್ಬರೂ ವಿದ್ಯಾರ್ಥಿಗಳ ಸ್ಥಿತಿ ಗಂಭೀರ

suddionenews
1 Min Read

ಚಿತ್ರದುರ್ಗ, (ಡಿ.26) : ರಾಷ್ಟ್ರೀಯ ಹೆದ್ದಾರಿ 13 ಪಿಳ್ಳೆಕೆರೆನಹಳ್ಳಿ ಬಳಿಯ ಬಾಪೂಜಿ ಶಾಲೆಯ ಮುಂಭಾಗದಲ್ಲಿ ಕಾರು ಬೈಕ್ ಡಿಕ್ಕಿಯಾಗಿ ಇಬ್ಬರೂ ವಿದ್ಯಾರ್ಥಿಗಳಾಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾನ್ಹ ಎರಡು ಗಂಟೆ ಸುಮಾರಿಗೆ ನಡೆದ ರಸ್ತೆ ಅಪಘಾತದಲ್ಲಿ ಹೊಸಪೇಟೆ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಬಾಪೂಜಿ ಶಾಲೆಯ ಮುಂಭಾಗದ ತಿರುವಿನಲ್ಲಿ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಡಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ತೀವ್ರವಾಗಿ ಗಾಯಗೊಂಡಿದ್ದವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ವಿದ್ಯಾರ್ಥಿಗಳಿಬ್ಬರೂ ಚಿತ್ರದುರ್ಗದ ಐಯುಡಿಪಿ ಲೇಔಟ್ ನಿವಾಸಿಗಳು.

ಶರತ್ (19 ವರ್ಷ) ನಗರದ ಕಾಲೇಜೊಂದರಲ್ಲಿ ಫಾರ್ಮಸಿ ವಿದ್ಯಾರ್ಥಿ.
ಶಿರೀಷ (19 ವರ್ಷ) ಬೆಂಗಳೂರಿನ ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ. ಇಬ್ಬರೂ ಪಿಳ್ಳೆಕೆರೆನಹಳ್ಳಿಯಿಂದ ಅವರ ಮನೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಸದ್ಯ ಇವರು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *