Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೇವಲ ಪ್ರತಿಭಟನೆಯಿಂದಾಗಿ ಲಾಠಿ ಚಾರ್ಜ್ ಮಾಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಹೇಳಿಕೆ

---Advertisement---

ದೆಹಲಿ.ಜುಲೈ.27: ಇತ್ತೀಚೆಗೆ ನಡೆದ ವಿದ್ಯಾರ್ಥಿ ಪ್ರತಿಭಟನೆಗಳ ವೇಳೆ ಪೊಲೀಸರು ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂಬ ಆರೋಪಗಳ ಕುರಿತು ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಸುಪ್ರೀಂ ಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಮೌಖಿಕ ಟಿಪ್ಪಣಿ ಮಾಡಿದೆ. ಕೇವಲ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಒಂದೇ ಕಾರಣಕ್ಕೆ ಪೊಲೀಸರು ಲಾಠಿಚಾರ್ಜ್ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಪ್ರತಿಪಾದಿಸಿದೆ.

ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಬಲಪ್ರಯೋಗ ಮಾಡಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ಹೊಸ ಅರ್ಜಿಗಳ ಗುಂಪನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠದ ಮುಂದೆ ಪ್ರಸ್ತಾಪಿಸಲಾಯಿತು. ಪ್ರತಿಭಟನೆಯ ಸಮಯದಲ್ಲಿ ತಮ್ಮ ಮೇಲೆ ದೌರ್ಜನ್ಯ ಎಸಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳ ಗುಂಪೊಂದು ಸಲ್ಲಿಸಿರುವ ಅರ್ಜಿಯೂ ಇದರಲ್ಲಿ ಸೇರಿದೆ. ಇದರ ಜೊತೆಗೆ, ಬಿಹಾರದ ಸಿವಾನ್ ನಲ್ಲಿ ಪ್ರತಿಭಟನಾಕಾರರ ವಿರುದ್ಧ ಎಕೆ-47 ಬಂದೂಕುಗಳನ್ನು ಬಳಸಲಾಗಿದೆ ಎಂದೂ ಒಂದು ಅರ್ಜಿಯಲ್ಲಿ ಗಂಭೀರ ಆರೋಪ ಮಾಡಲಾಗಿದೆ.

ಸಂತ್ರಸ್ತರ ಪರ ವಾದಗಳನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, “ನಾವು ಈ ಎಲ್ಲಾ ಅರ್ಜಿಗಳನ್ನು ನಾಳೆ (ಮಂಗಳವಾರ, ಜುಲೈ 28) ವಿಚಾರಣೆಗೆ ಪಟ್ಟಿ ಮಾಡುತ್ತೇವೆ. ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸೂಕ್ತ ರಕ್ಷಣೆ ಸಿಗಬೇಕು. ಒಂದು ವೇಳೆ ಪೋಲಿಸರಿಂದ ಅತಿಯಾದ ಬಲಪ್ರಯೋಗ ಅಥವಾ ದೌರ್ಜನ್ಯಗಳು ನಡೆದಿದ್ದರೆ, ಅದನ್ನು ತಕ್ಷಣವೇ ತಡೆಯಬೇಕಾಗಿದೆ. ಇದಕ್ಕೆ ಸೂಕ್ತ ಪ್ರೋಟೋಕಾಲ್ ಮತ್ತು ನಿಯಮಾವಳಿಗಳಿರಬೇಕು. ಇದು ಕೇವಲ ದೆಹಲಿಗೆ ಮಾತ್ರ ಸೀಮಿತವಾದ ವಿಚಾರವಲ್ಲ, ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಯಾರೋ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಕಾರಣಕ್ಕಷ್ಟೇ ಲಾಠಿಚಾರ್ಜ್ ಮಾಡುವುದು ಸರಿಯಲ್ಲ” ಎಂದು ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.

Join WhatsApp

Join Now

Join Telegram

Join Now