Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅನ್ನಭಾಗ್ಯ ಯೋಜನೆಗೆ ಚಾಲನೆ : ನಾಳೆಯಿಂದಾನೇ ಚಾಲ್ತಿ

---Advertisement---

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮಹತ್ವದ ಅನ್ನಭಾಗ್ಯ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಐದು ಕೆಜಿ ಅಕ್ಕಿ, ಇನ್ನುಳಿದ ಐದು ಕೆಜಿ ಅಕ್ಕಿಯ ಹಣ ನೇರ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂಜೆ ಚಾಲನೆ ನೀಡಿದ್ದಾರೆ.

 

15 ದಿನಗಳಲ್ಲಿ ಬಿಪಿಎಲ್ ಕಾರ್ಡುದಾರರ ಖಾತೆಗೆ ಹಣ ನೇರವಾಗಿ ವರ್ಗಾವಣೆಯಾಗಲಿದೆ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ 1.28 ಕೋಟಿ ಕುಟುಂಬಗಳು ಪಡಿತರ ಚೀಟಿಯನ್ನು ಹೊಂದಿದೆ. ಅದರಲ್ಲಿ ಶೇಕಡ 99% ರಷ್ಟು ಜನ ಆಧಾರ್ ಕಾರ್ಡ್ ಗೆ ಬ್ಯಾಂಕ್ ಅಕೌಂಟ್ ಲಿಂಕ್ ಮಾಡಿಸಿವೆ.

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಎಲ್ಲಾ ಸದಸ್ಯರಿಗೂ 10 ಕೆ.ಜಿ. ಅಕ್ಕಿ ಕೊಡುವುದಾಗಿ ಘೋಷಣೆ ಮಾಡಲಾಗಿತ್ತು. ಅಕ್ಕಿ ಪೂರೈಕೆಯಲ್ಲಿ ಕೊರತೆಯಾದ ಕಾರಣ 5 ಕೆ.ಜಿ. ಮತ್ತು ಉಳಿದ 5 ಕೆ.ಜಿ. ಅಕ್ಕಿಯ ಬದಲಾಗಿ ಹಣ ಕೊಡುವುದಾಗಿ ಸರ್ಕಾರ ಹೇಳಿದೆ. ಪ್ರತಿ ಕೆ.ಜಿ. ಅಕ್ಕಿಗೆ 34 ರೂಪಾಯಿಗಳಂತೆ ಬಿಪಿಎಲ್ ಕಾರ್ಡ್ ಕುಟುಂಬದ ಪ್ರತಿ ಸದಸ್ಯರಿಗೆ 170 ರೂಪಾಯಿ ಸಿಗಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...