ನಾಳೆ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳದಂತೆ ಜೋಶಿ ಮನವಿ

suddionenews
1 Min Read

ಹುಬ್ಬಳ್ಳಿ: ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕವನ್ನು ತೆಗೆಯಲೇಬೇಕೆಂದು ಒತ್ತಾಯಿಸಿ ನಾಳೆ ಶ್ರೀರಾಮಸೇನೆ, ಸುಒ್ರಭಾತ ಕಾರ್ಯಕ್ರಮ ಶುರು ಮಾಡಿಕೊಂಡಿದೆ. ಮಸೀದಿಗಳಲ್ಲಿ ಆಜಾನ್ ಕೂಗುವ ಮೊದಲೇ ಸುಪ್ರಭಾತ ಕೂಗಲೂ ಸಿದ್ಧತೆ ನಡೆಸಿಕೊಂಡಿದ್ದಾರೆ. ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾನೂನು ಕೈಗೆತ್ತಿಕೊಳ್ಳದಂತೆ ಮನವಿ ಮಾಡಿದ್ದಾರೆ.

ಶರೇವಾಡ ಗ್ರಾಮದಲ್ಲಿ ಮಾತನಾಡಿದ ಜೋಶಿ ಅವರು, ಸರ್ಕಾರ ಸುಮ್ಮನೆ ಇದೆ ಎಂದು ಯಾರು ಭಾವಿಸಬೇಡಿ. ಕಾನೂನನ್ನು ಯಾರು ಕೂಡ ಕೈಗೆತ್ತಿಕೊಳ್ಳಬೇಡಿ. ಹುಂದೂಪರ ಸಂಘಟನೆಗಳು ಸರ್ಕಾರಕ್ಕೆ ಗಡುವು ಕೊಟ್ಟಿರುವುದು ಗೊತ್ತಿಲ್ಲ. ಕಾನೂನು ಪ್ರಕಾರವೇ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ಪಿಎಸ್ಐ ಹಗರಣದ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ, ಕಿಂಗ್ ಪಿನ್ ಹೆಸರು ಬಹಿರಂಗಪಡಿಸಿದರೆ ಸರ್ಕಾರ ಉರುಳುತ್ತೆ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸರ್ಕಾರ ಉರುಳಿಸೋದು, ಬಿಡುವುದು ಅವರ ಜವಬ್ದಾರಿಯಲ್ಲ. ಅಕ್ರಮ ನೇಮಕಾತಿಯ ಬಗ್ಗೆ ಯಾರ ಬಳಿ ಮಾಹಿತಿ ಇದೆ, ಆ ಮಾಹಿತಿಯನ್ನು ನೀಡಲಿ. ಸಿಐಡಿ ಈ ಕುರಿತು ಮುಂದಿನ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *