Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕಾನೂನು ವಿದ್ಯಾರ್ಥಿಗಳು..!

---Advertisement---

 

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ, ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೆ ಅಸ್ತು ಎಂದಿದೆ. ಅದರಲ್ಲಿ ಶಕ್ತಿ ಯೋಜನೆ ಬಹಳ ಮುಖ್ಯವಾಗಿದೆ. ಫ್ರೀ ಬಸ್ ಬಿಟ್ಟಾಗಿನಿಂದ ಮಹಿಳೆಯರ ಓಡಾಟ ಜಾಸ್ತಿಯಾಗಿದೆ. ಧಾರ್ಮಿಕ ಕ್ಷೇತ್ರಗಳಿಗೆ ಹೋಗುವವರು ಹೆಚ್ಚಾಗಿದ್ದಾರೆ.

ಶಕ್ತಿ ಯೋಜನೆಯ ವಿರುದ್ಧ ಕಾನೂನು ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ. ಫ್ರೀ ಬಸ್ ಯೋಜನೆಯಡಿ, ಸರ್ಕಾರಿ ಬಸ್ ಗಳೆಲ್ಲಾ ತುಂಬಿ ತುಳುಕುತ್ತಿವೆ. ಇದರಿಂದ ಸಾಕಷ್ಟು ಅನಾಹುತಗಳಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಸೀಟಿಗಾಗಿ ಹೊಡೆದಾಟ ನಡೆಯುತ್ತಿದೆ. ಹಿರಿಯ ನಾಗರಿಕರು, ಮಕ್ಕಳು ಬಸ್ ಹತ್ತಲಾಗುತ್ತಿಲ್ಲ. ಕೆಲವೆಡೆ ಬಸ್ ಹತ್ತಲಾಗದೇ ವಿದ್ಯಾರ್ಥಿಗಳು ಬಿದ್ದ ಘಟನೆ ನಡೆದಿವೆ. ಶಾಲಾ ಕಾಲೇಜು ಪರೀಕ್ಷೆಗಳಿಗೆ ಸರಿಯಾದ ವೇಳೆಗೆ ಹೋಗಲಾಗುತ್ತಿಲ್ಲ. ಒಂದೇ ವಾರದಲ್ಲಿ ತೆರಿಗೆದಾರರ 100 ಕೋಟಿ ಹಣ ಬಳಕೆಯಾಗಿದೆ. ಸರ್ಕಾರ ಶಕ್ತಿ ಯೋಜನೆಗೆ ಬಳಕೆಯಾಗಿದೆ ಎಂದು ಉಲ್ಲೇಖಿಸಿದ್ದಾರೆ ಎಂದು ಪಿಐಎಲ್​​ನಲ್ಲಿ ಉಲ್ಲೇಖಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...