Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮ ರಾಜ್ಯವಾಗಲು ಕಾನೂನು ಕಾಯಿದೆಗಳು ಬೇಕಾಗಿಲ್ಲ,  ರಾಮನಲ್ಲಿದ್ದ ಗುಣವನ್ನು ಅಳವಡಿಸಿಕೊಂಡರೆ ಸಾಕು : ವಿದ್ವಾನ್ ಕೃಷ್ಣರಾಜ ಕುತ್ಪಾಡಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.23 : ರಾಮ ರಾಜ್ಯವಾಗಲು ಕಾನೂನು ಕಾಯಿದೆಗಳು ಬೇಕಾಗಿಲ್ಲ. ರಾಮನಲ್ಲಿದ್ದ ಗುಣವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡರೆ ಅದುವೆ ನಿಜವಾದ ರಾಮ ರಾಜ್ಯ ಎಂದು ಬೆಂಗಳೂರಿನ ಪೂರ್ಣಪ್ರಜ್ಞಾ ವಿದ್ಯಾಪೀಠದ ಅಧ್ಯಾಪಕ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಹೇಳಿದರು.

ಹರಿವಾಯು ಸ್ತುತಿ ಪಾರಾಯಣದ 23 ನೇ ವಾರ್ಷಿಕೋತ್ಸವದ ಅಂಗವಾಗಿ ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಹರಿದಾಸ ಹಬ್ಬದ ಎರಡನೆ ದಿನದಂದು ಪ್ರವಚನ ನೀಡಿದ ಅವರು ರಾಮನ ಸಾಲು ಸಾಲು ಪ್ರಶ್ನೆಗಳಿಗೆ ವಿಶ್ವಾಮಿತ್ರ ತಾಳ್ಮೆಗೆಡಲಿಲ್ಲ. ಪ್ರಾಮಾಣಿಕ ಪ್ರಯತ್ನವಿದ್ದರೆ ದೈವವೂ ಸಹಾಯ ಮಾಡುತ್ತದೆ. ಶ್ರೀರಾಮಚಂದ್ರ ರಾಜನಾಗಿದ್ದರೂ ಯಾರ ಮೇಲೂ ದರ್ಪ ತೋರಲಿಲ್ಲ. ತ್ಯಾಗದ ಗುಣವಿತ್ತು. ಗುರುಗಳ ಜೊತೆ ಕಾಡಿನಲ್ಲಿ ಗೆಡ್ಡೆ ಗೆಣಸು ತಿಂದಿದ್ದುಂಟು. ರಾಮನ ಪರಿಚಯವಾಗಬೇಕಾದರೆ ರಾಮಾಯಣ ಓದಬೇಕು. ದೇಶದ ಕ್ಷೇತ್ರಗಳ ಬಗ್ಗೆ ತಿಳಿದುಕೊಳ್ಳಬೇಕಾದರೆ ಮಥುರ, ಜಗನ್ನಾಥಪುರಿ ಇನ್ನು ಮುಂತಾದ ಕಡೆ ಹೋಗಬೇಕು. ನಮ್ಮೂರಲ್ಲಿ ನಾವೇ ಅಧಿಪತಿಗಳಾಗಬಾರದು ಎಂದು ತಿಳಿಸಿದರು.

ಹಾಲು, ಮೊಸರು, ಬೆಣ್ಣೆ, ತುಪ್ಪ, ಗೋಮೂತ್ರ ಇವುಗಳು ಎಂದಿಗೂ ವಿಷವಾಗುವುದಿಲ್ಲ. ಸಂಸ್ಕøತಿ ರಕ್ಷಣೆ ಬಗ್ಗೆ ಮಕ್ಕಳಲ್ಲಿ ಕಲಿಸಬೇಕು. ದೇಶದ ಪೂರ್ವ ಇತಿಹಾಸ ಗೊತ್ತಿಲ್ಲದವರನ್ನು ಯಾರು ನಾಶ ಮಾಡುವುದು ಬೇಡ. ಅವರೆ ನಾಶವಾಗುತ್ತಾರೆ. ಬಾಲ್ಯದಲ್ಲಿ ಒಂದು ಬಾರಿ ಕಲಿತದ್ದನ್ನು ಜೀವನವಿಡಿ ನೆನಪಿಟ್ಟುಕೊಳ್ಳುವಂತ ಶಿಕ್ಷಣ ಬೇಕು. ಆದರೆ ಇಂದಿನ ಶಿಕ್ಷಣ ಶಿಕ್ಷೆ ಎನ್ನುವಂತಾಗಿದೆ. ಮಕ್ಕಳಿಗೆ ಪೋಷಕರು ಕಣ್ಗಾವಲಾಗಬೇಕೆ ವಿನಃ ಕೈಗಾವಲಾಗಬಾರದು ಎಂದು ಪ್ರವಚನ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!