Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ್ಯಾಯವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶ ಮಾಡಬೇಕು : ಡಾ.ಬಿ. ತಿಪ್ಪೇಸ್ವಾಮಿ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ.18 : ಈ ಹಿಂದೆ ನ್ಯಾಯವಾದಿಗಳಾದವರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯಕ್ಕೆ ಬರುತ್ತಿದ್ದರು, ಅವರು ಕಾನೂನು ತಿಳಿದುಕೊಂಡಿರುವುದರಿಂದ ಉತ್ತಮವಾದ ಆಡಳಿತವನ್ನು ನೀಡಲು ಸಹಕಾರಿಯಾಗುತ್ತಿತ್ತು. ಆದರೆ ಇತ್ತಿಚಿನ ದಿನಮಾನದಲ್ಲಿ ನ್ಯಾಯವಾದಿಗಳು ರಾಜಕೀಯಕ್ಕೆ ಬರುವ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ, 2024ರ ಲೋಕಸಭೆ ಚುನಾವಣೆ ಟಿಕೇಟ್ ಆಕಾಂಕ್ಷಿ ಡಾ.ಬಿ. ತಿಪ್ಪೇಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ.

ನಗರದ ವಕೀಲರ ಸಂಘದ ಆಶ್ರಯದಲ್ಲಿ ನಡೆದ ಶಾರದ ಪೂಜಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ಹಿಂದೆ ಕಾನೂನನ್ನು ತಿಳಿದಿರುವ ನ್ಯಾಯವಾದಿಗಳು ರಾಜಕೀಯದಲ್ಲಿ ಆಸಕ್ತಿಯನ್ನು ಹೊಂದುವುದರ ಮೂಲಕ ರಾಜಕೀಯವನ್ನು ಪ್ರವೇಶ ಮಾಡುತ್ತಿದ್ದರು. ಇದರಿಂದ ಅಧಿಕಾರಿಗಳಿಗೆ ಕಾನೂನಿನ ಬಗ್ಗೆ ತಿಳಿಸಿ ಜನತೆ ಸರಿಯಾದ ರೀತಿಯಲ್ಲಿ ಸಹಾಯವನ್ನು ಮಾಡುತ್ತಿದ್ದರು ಈಗಲೂ ಸಹಾ ರಾಜಕೀಯದಲ್ಲಿ ಹಲವಾರು ಜನ ನ್ಯಾಯವಾದಿಗಳು ಇದ್ದಾರೆ ಆದರೆ ಕಡಿಮೆ ಸಂಖ್ಯೆಯಲ್ಲಿದ್ದಾರೆ ಇದರ ಪ್ರಮಾಣ ಹೆಚ್ಚಾಗಬೇಕಿದೆ. ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿಗಳಲ್ಲಿ ಸ್ಪರ್ದೆ ಮಾಡುವುದರ ಮೂಲಕ ಜನ ಸೇವೆಯನ್ನು ಮಾಡಬೇಕಿದೆ.

ಇದಲ್ಲದೆ ವಿಧಾನಸಭೆ, ಮತ್ತು ಲೋಕಸಭೆಗಳಲ್ಲಿಯೂ ಸಹಾ ಚುನಾವಣೆಯಲ್ಲಿ ಸ್ಫರ್ದೆಯನ್ನು ಮಾಡಬೇಕಿದೆ ಎಂದ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷದಿಂದ ಸ್ಪರ್ದೆ ಮಾಡುತ್ತೇನೆ. ಈ ಹಿನ್ನಲೆಯಲ್ಲಿ ನಿಮ್ಮ ಬೆಂಬಲ ನನಗೆ ಇರಬೇಕೆಂದು ಮನವಿ ಮಾಡಿದರು.

ವಕೀಲರ ಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಮಾತನಾಡಿ, ಚಿತ್ರದುರ್ಗ ಲೋಕಸಭೆಗೆ ಇದುವರೆವಿಗೂ ಹೂರಗಿನಿಂದ ಬಂದವರು ಆಯ್ಕೆಯಾಗುವುದರ ಮೂಲಕ ರಾಜಕೀಯವನ್ನು ಮಾಡುತ್ತಿದ್ದಾರೆ. ಇವರಿಂದ ಚಿತ್ರದುರ್ಗ ಜಿಲ್ಲೆ ಯಾವ ಅಭಿವೃದ್ದಿಯನ್ನು ಕಂಡಿಲ್ಲ, ಅಯ್ಕೆಯಾದಾಗ ಮಾತ್ರ ಮತದಾರರ ಕೈಗೆ ಸಿಗುವ ಸಂಸತ್ ಸದಸ್ಯರು ಮತ್ತೇ ಇತ್ತ ಕಡೆ ಬರುವುದೇಲ್ಲಾ, ಈ ರೀತಿಯಾದರೆ ಅಭೀವೃದ್ದಿ ಯಾವ ರೀತಿ ಆಗುತ್ತದೆ ಎಂದು ಪೃಶ್ನಿಸಿದ ಅವರು, ಈ ಭಾರಿ ನಮ್ಮಮ ಚಿತ್ರದುರ್ಗದವರೆ ಆದ ಡಾ.ಬಿ.ತಿಪ್ಪೇಸ್ವಾಮಿಯವರು ಲೋಕಸಭಾ ಚುನಾವಣೆಯಲ್ಲಿ ಸ್ಫರ್ದಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದು ಕಾಂಗ್ರೆಸ್ ಪಕ್ಷದಿಂದ ಟಿಕೇಟ್ ತರುವ ಪ್ರಯತ್ನದಲ್ಲಿದ್ದಾರೆ. ಅವರೇನಾದರೂ ಕಾಂಗ್ರಸ್ ಪಕ್ಷದಿಂದ ಟಿಕೇಟ್ ತಂದರೆ ಅವರಿಗೆ ವಕೀಲರ ಸಂಘ ಪೂರ್ಣ ಪ್ರಮಾಣದಲ್ಲಿ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ನ್ಯಾಯವಾದಿಗಳಾದ ಮಾಲತೇಶ್ ಆರಸ್, ದಯಾನಂದ, ಪ್ರತಾಪ್ ಜೋಗಿ, ಆಶೋಕ ಬೆಳಗಟ್ಟ ಸೇರಿದಂತೆ ಇತರರು ಮಾತನಾಡಿದರು.

ವಕೀಲರ ಸಂಘದ ಉಪಾಧ್ಯಕ್ಷರಾದ ಅನಿಲ್‍ಕುಮಾರ್, ಖಂಜಾಚಿ ಪ್ರದೀಪ್ ಸಹಕಾರ್ಯದರ್ಶಿ ಗೀರೀಶ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!