Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೌಭಾಗ್ಯ ಲಕ್ಷ್ಮೀ ಹೆಸರೇಳಿ ರಮೇಶ್ ಜಾರಕಿಹೊಳಿ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಲಕ್ಷ್ಮಣ್

Facebook
Twitter
Telegram
WhatsApp

ಬೆಂಗಳೂರು: Kpcc ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಸುದ್ದಿಗೋಷ್ಟೀ ನಡೆಸಿ, ರಮೇಶ್ ಜಾರಕಿಹೊಳಿ ಮೇಲೆ ಆರೋಪ ಹೊರಿಸಿದ್ದಾರೆ. 819 ಕೋಟಿ ಹಣ ಲೂಟ್ ಮಾಡಿದ್ದಾರೆ. ಇದು ಸಾರ್ವಜನಿಕ ಹಣ. ಇದರಲ್ಲಿ ಅಮಿತ್ ಶಾ, ಫಡ್ನವಿಸ್ ಮತ್ತು ಬೊಮ್ಮಾಯಿ ಭಾಗಿ ಆಗಿದ್ದಾರೆ. ರಮೇಶ್ ಜಾರಕಿಹೊಳಿಗೆ ಇನ್ನೂ ನೋಟಿಸ್ ನೀಡಿಲ್ಲ ಎಂದು ಕಿಡಿಕಾರಿದ್ದಾರೆ.

ಮಗ, ಮಗಳು, ಸೊಸೆ ಮತ್ತು ರಮೇಶ್ ಸೇರಿ ಎಂಟು ಜನ ಈ ಸೌಭಾಗ್ಯ ಲಕ್ಷ್ಮೀ ಶುಗರ್ ಪ್ರಮುಖ ರುವಾರಿಗಳು. ಸೌಭಾಗ್ಯ ಲಕ್ಷ್ಮೀ ಶುಗರ್ ಅವರೇ ಬರೆದಿರುವ ದಾಖಲೆ ಬಿಡುಗಡೆ ಮಾಡ್ತಾ ಇದ್ದೇನೆ. ಅಭಿನಂದನ್ ಪಾಟೀಲ್ ರಮೇಶ್ ಜಾರಕಿಹೊಳಿಯ ಬೇನಾಮಿ ಆಸ್ತಿಯ ಹೋಲ್ಡರ್ ಆಗಿದ್ದಾರೆ. ಅವರು ಜಾರಕಿಹೊಳಿ ಜೊತೆಯೆ ಓಡಾಡ್ತಾ ಇರ್ತಾರೆ. ಅಭಿನಂದನ್ ಪಾಟೀಲ್ ಹೆಸರಲ್ಲಿ ಒಂದು ಕಂಪನಿ ಇದೆ.

ಸೌಭಾಗ್ಯ ಲಕ್ಷ್ಮೀ ಲಾಸ್ ಆಗಿದೆ ಎಂದು ಘೋಷಣೆ ಮಾಡಿದ್ದಾರೆ.
ಆದ್ರೂ ಅಲ್ಲಿ ಕಬ್ಬನ್ನು ಅರಿತಾ ಇದ್ದಾರೆ. ಅದರಿಂದ ಲಾಭ ಬರ್ತಾ ಇದೆ. ಲಾಭಾಂಶ ಬೋರ್ಡ್ ಡೈರೆಕ್ಟರ್ ಗೆ ಹೋಗ್ತಾ ಇದೆ. ಬೋರ್ಡ್ ಡೈರೆಕ್ಟರ್ ಅವರ ಮಗ, ಮಗಳು, ಸೊಸೆ ಇನ್ನುಳಿದವರು. ಅವರಿಗೆ ಲಾಭಾಂಶ ಹೋಗ್ತಿದೆ.

2019 ರಲ್ಲಿ ಸೌಭಾಗ್ಯ ಲಕ್ಷ್ಮಿ ಶುಗರ್ ಗೆ ನೊಟೀಸ್ ಕೊಡ್ತಾರೆ, ಅಫೆಕ್ಸ್ ಬ್ಯಾಂಕ್ ರಮೇಶ್ ಗೆ ನೊಟೀಸ್ ಮಾಡ್ತಾರೆ. ಅದರ ಅಧ್ಯಕ್ಷ ಬೆಳ್ಳಿ ಪ್ರಕಾಶ್. ನೀವು ಪಡೆದ ಸಾಲ ಹಿಂದುರಿಗಿಸಿದ ಹಿನ್ನಲೆ ನಿಮ್ಮ ಆಸ್ತಿ ಮುಟ್ಟುಗೋಲು ಹಾಕಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ನೊಟೀಸ್ ಕೊಡ್ತಾರೆ. ಜಿಲ್ಲಾಧಿಕಾರಿ ಇಲ್ಲಿ ತನಕ ಏನು ಮಾಡಿಲ್ಲ. ಬಳಿಕ ರಮೇಶ್ ಕೋರ್ಟ್ ಮೊರೆ ಹೋಗ್ತಾರೆ. ಕೋರ್ಟ್ ಒಂದು ನಿರ್ದೆಶನ ನೀಡುತ್ತೆ. ಮೊದಲು ನೀವು ಪಡೆದ ಸಾಲದ ಅರ್ಧ ಪಾವತಿ ಮಾಡಿ ಎಂದು ಸೂಚನೆ ನೀಡುತ್ತೆ. ಆದ್ರೆ ಕೋರ್ಟ್ ಸೂಚನೆಯನ್ನು ಜಾರಕಿಹೊಳಿ ಪಾಲನೆ ಮಾಡಲ್ಲ. ಅದಾದ ಬಳಿಕ ಮತ್ತೆ ಅಫೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿಪ್ರಕಾಶ್ ಕೋರ್ಟ್ ಸೂಚನೆಯ ಹಿನ್ನಲೆ ನೋಟಿಸ್ ನೀಡ್ತಾರೆ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಪರ್ಮಿಶನ್ ಕೇಳ್ತಾರೆ. 900 ಕೋಟಿ ಗೂ ಹೆಚ್ಚಿನ ಆಸ್ತಿ ಮೌಲ್ಯ ಹೊಂದಿದೆ ಸೌಭಾಗ್ಯ ಲಕ್ಷ್ಮೀ ಶುಗರ್ ಎಂದು ಹಲವು ಆರೋಪಗಳನ್ನು ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

ಚಿತ್ರದುರ್ಗ ಲೋಕಸಭಾ ಚುನಾವಣೆ, ಹೊರಗಿನವರಿಗೆ ಮಣೆ : ರಘು ಚಂದನ್ ಬೇಸರ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ. 28 :  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಸ್ಥಳೀಯರಿಗೆ ಬಿಜೆಪಿ ಟಿಕೆಟ್ ನೀಡದೆ 500

ಚಿತ್ರದುರ್ಗ ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟ | ಏಪ್ರಿಲ್ 4ರ ವರೆಗೆ ನಾಮಪತ್ರ ಸ್ವೀಕಾರ

ಚಿತ್ರದುರ್ಗ. ಮಾರ್ಚ್. 28: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರ ಆಯ್ಕೆಗೆ ಮಾರ್ಚ್.28 ಗುರುವಾರದಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸ್ವೀಕರಿಸಲಾಗುತ್ತಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.‌ ನಂ.18 ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ

error: Content is protected !!