ಟಿಕೆಟ್ ಗಾಗಿ ಕೆಪಿಸಿಸಿಯಲ್ಲಿಯೇ ಬಡಿದಾಡಿಕೊಂಡ ಕೈ ನಾಯಕರು..!

suddionenews
1 Min Read

ಬೆಂಗಳೂರು: ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಕಾಂಗ್ರೆಸ್ ನಲ್ಲಿ ಚುನಾವಣಾ ಟಿಕೆಟ್ ಗಾಗಿ ಅದಾಗಲೇ ಬಾರೀ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಇದೀಗ ಟಿಕೆಟ್ ವಿಚಾರವಾಗಿ ಕೈ ನಾಯಕರು ಕೈ ಕೈ ಮಿಲಾಯಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಸಭೆ ನಡೆದಿದೆ. ಈ ಸಭೆಯಲ್ಲಿ ಮಾಜಿ ಮೇಯರ್ ಪದ್ಮಾವತಿ, ಮನೋಹರ್, ಉಪಮೇಯರ್ ಪುಟ್ಟರಾಜು ಸೇರಿದಂತೆ ಹಲವರು ಭಾಗಿಯಾಗಿದ್ದರು. ಆದರೆ ಸಭೆಯ ನಡುವೆಯೇ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ.

ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳು ಬಂದು ಶಕ್ತಿಪ್ರದರ್ಶನ ಮಾಡಿದ್ದಾರೆ. ಟಿಕೆಟ್ ಗಾಗಿ ಪದ್ಮಾವತಿ, ಮನೋಹರ್, ಪುಟ್ಟರಾಜು ಅರ್ಜಿ ಸಲ್ಲಿಸಿದ್ದರು. ಇದೇ ವಿಚಾರಕ್ಕೆ ಮಾತಿಗೆ ಮಾತು ಬೆಳೆದು, ಬಳಿಕ ದೊಡ್ಡ ಜಗಳವೇ ನಡೆದು ಹೋಗಿದೆ.

Share This Article
Leave a Comment

Leave a Reply

Your email address will not be published. Required fields are marked *