Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಡಿಕೆಗೆ ಬಡಿದ ಎಲೆಚುಕ್ಕೆ ರೋಗ : ಸದನದಲ್ಲಿ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು..?

---Advertisement---

ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಮಾತನಾಡಿದ್ದಾರೆ. ಎಲೆ ಚುಕ್ಕೆ ರೋಗದಿಂದ ಎಷ್ಟು ನಷ್ಟವಾಗಿದೆ ಎಂಬುದನ್ನು ತಿಳಿಸಿದ್ದಾರೆ.

ಎಲೆಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಅಡಿಕೆ ಬೆಳೆ ಹಾನಿಯಾಗಿದೆ. ಎಲೆ ಚುಕ್ಕೆ ರೋಗವೂ ಮೂರು ವಿಧದ ಶಿಲೀಂದ್ರದಿಂದ ಹರಡುತ್ತದೆ. ನೆಲಕ್ಕೆ ಬಿದ್ದ ಗರಿಗಳಲ್ಲಿ ಶಿಲೀಂದ್ರ ಬೆಳವಣಿಗೆಯಾಗುತ್ತದೆ‌. ಮಳೆಹನಿಗಳ ಚಿಮ್ಮುವಿಕೆಯಿಂದ ಶಿಲೀಂದ್ರಗಳು ಗಾಳಿಯಲ್ಲಿ ಸೇರಿ ಇತರೆ ತೋಟಗಳಿಗೂ ಹರಡುತ್ತವೆ. ತೇವಭರಿತ ಬಿಸಿಲಿನ ವಾತಾವರಣ ಹಾಗೂ ಹೆಚ್ಚಿನ ಆದ್ರತೆಯ ವಾತಾವರಣದಲ್ಲಿ ರೊಇಗ ತೀವ್ರವಾಗಿ ಹರಡುತ್ತಿದೆ. ರೋಗ ಹರಡದಂತೆ ನಿಯಂತ್ರಣ ಮಾಡಲು ಸರ್ಕಾರ ಶಿವಮೊಗ್ಗ ತೋಟಗಾರಿಕಾ ವಿಶ್ವ ವಿದ್ಯಾಲಯದ ತಜ್ಞರ ನೇತೃತ್ವದ ತಂಡ ರಚನೆ ಮಾಡಿದ್ದು, ಸಂಶೋಧನೆಗೆ 50 ಲಕ್ಷ ಅನುದಾನ ಒದಗಿಸಿದೆ.

 

2023-24ನೇ ಸಾಲಿನಲ್ಲಿ 6.250 ಹೆಕ್ಟೇರ್ ಪ್ರದೇಶದ 12,300 ಅಡಿಕೆ ಬೆಳೆಗಾರರಿಗೆ 2.50 ಕೋಟಿ ಅನುದಾನವನ್ನು ನೀಡಲಾಗಿದೆ. ಸಾಂಪ್ರದಾಯಿಕವಾಗಿ ಅಡಿಕೆ ಬೆಳೆಯುವ ಪ್ರದೇಶದಲ್ಲಿ ಅಡಿಕೆ ಬೆಳೆ ಕಟಾವು ಹಾಗೂ ಸಿಂಪರಣೆಗಾಗಿ ದೋಟಿ ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ, ಸಾಮಾನ್ಯ ವರ್ಗದವರಿಗೆ ಶೇಕಡ 40ರಷ್ಟು ಹಾಗೂ ಪರಿಶಿಷ್ಟ ಜಾತಿ/ಪಂಗಡದವರಿಗೆ ಶೇ.50ರಷ್ಡು ಸಹಾಯಧನ ನೀಡಲಾಗುತ್ತದೆ. ರೋಗದ ಅಧ್ಯಯನಕ್ಕಾಗಿ ಕೇಂದ್ರ ಸರ್ಕಾರ ನೇಮಿಸಿರುವ ವೈಜ್ಞಾನಿಕ ತಂಡ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ, ತಾಂತ್ರಿಕ ಸಲಹೆಗಳನ್ನು ನೀಡಿದೆ. ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಅವರ ಮೂಲಕ ಸರ್ಕಾರಕ್ಕೆ 225.73 ಕೋಟಿ ಪರಿಹಾರ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಅವರು ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...