Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟೈಲರಿಂಗ್ ತರಬೇತಿ ಪಡೆದು ಸ್ವಾವಲಂಬಿಯಾಗಿ ಬದುಕಿ : ಶ್ರೀಮತಿ ಗೀತ ಬಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್,ಚಿತ್ರದುರ್ಗ, ಮಾರ್ಚ್.05 : ಟೈಲರಿಂಗ್ ತರಬೇತಿ ಪಡೆಯುವ ಮೂಲಕ ಸ್ವಾವಲಂಬಿಯಾಗಿ ಬದುಕುವುದರ ಜೊತೆಗೆ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪ್ರಾದೇಶಿಕ ನಿರ್ದೇಶಕಿ ಶ್ರೀಮತಿ ಗೀತ ಬಿ. ಹೇಳಿದರು.

ಸಿರಿಗೆರೆ ಯೋಜನಾ ಕಚೇರಿ ವ್ಯಾಪ್ತಿಯ ಹಿರೇಗುಂಟನೂರು ವಲಯದ ಕುರುಬರಹಳ್ಳಿಯ ಜ್ಞಾನವಿಕಾಸ ಕೇಂದ್ರದಲ್ಲಿ ಮೂರು ತಿಂಗಳುಗಳ ಕಾಲ ಜ್ಞಾನವಿಕಾಸ ಕೇಂದ್ರದ ಸದಸ್ಯರುಗಳಿಗೆ ಏರ್ಪಡಿಸಲಾಗಿದ್ದ ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭದಲ್ಲಿ 25 ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದೆ. ಕೇವಲ ಅಡುಗೆ ಮನೆಗಷ್ಟೆ ಮಹಿಳೆಯರು ಮೀಸಲಾಗದೆ ಇಂತಹ ಯೋಜನೆಗಳ ಸದಯಪಯೋಗಪಡಿಸಿಕೊಂಡು ಜೀವನದಲ್ಲಿ ಮುಂದೆ ಬರುವಂತೆ ತಿಳಿಸಿದರು.

ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಪೂಜಾರಿ, ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್ ಎ.ಜೆ. ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕಿ ಶ್ರೀಮತಿ ಸಾಹೇರಭಾನು, ವಲಯ ಮೇಲ್ವಿಚಾರಕಿ ನಿಂಗಮ್ಮ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಶಿವಲೀಲಾ ಎಸ್.ಬಾಗೋಡಿ, ಸೇವಾಪ್ರತಿನಿಧಿ ವಸಂತ, ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment