Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ವರ್ ಹ್ಯಾಕ್ ಹೇಳಿಕೆಯನ್ನು ಇಲ್ಲಿಗೆ ಬಿಟ್ಟು ಬಿಡಿ : ಸತೀಶ್ ಜಾರಕಿಹೊಳಿ

Facebook
Twitter
Telegram
WhatsApp

 

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗುವುದಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಅದಕ್ಕೆಂದೆ ಸೇವಾ ಸಿಂಧು ಅಪ್ಲಿಕೇಷನ್ ನಲ್ಲಿ ಅವಕಾಶ ನೀಡಿದೆ. ಆದರೆ ಎಲ್ಲರು ಒಟ್ಟಿಗೆ ಅಪ್ಲಿಕೇಷನ್ ಹಾಕುವುದಕ್ಕೆ ಪ್ರಯತ್ನಿಸಿದಾಗ ಸರ್ವರ್ ಸಪೋರ್ಟ್ ಮಾಡುತ್ತಿಲ್ಲ. ಈ ಬಗ್ಗೆ ಸತೀಶ್ ಜಾರಕಿಹೊಳಿ, ನಮ್ಮ ಯೋಜನೆಗಳಿಗೆ ಅಡ್ಡಗಾಲು ಹಾಕಲು ಕೇಂದ್ರ ಸರ್ಕಾರ ಸರ್ವರ್ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿದ್ದು, ಆ ಹೇಳಿಕೆಯನ್ನು ಇಲ್ಲಿಗೆ ಬಿಟ್ಟು ಬಿಡಿ. ನನ್ನ ಹೇಳಿಕೆಯನ್ನು ಹಿಂಪಡೆಯಲ್ಲ. ಅದು ರಾಜಕೀಯ ಹೇಳಿಕೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಸರ್ವರ್ ಹ್ಯಾಕ್ ಮಾಡಿಲ್ಲ ಎಂದರೆ‌ಮುಗಿಯಿತು. ಕೇಂದ್ರ ಸರ್ಕಾರದ ವಿರುದ್ಧ ಫೋನ್ ಟ್ಯಾಪ್, ವಿದ್ಯುನ್ಮಾನ ಮಾಧ್ಯಮದ ಹ್ಯಾಕ್ ನಂತಹ ಆರೋಪಗಳು ಕೇಳಿ ಬಂದಿದೆ. ಅದೇ ರೀತಿ ನಮ್ಮ ಸರ್ಕಾರದ ಸರ್ವರ್ ಹ್ಯಾಕ್ ಆಗಿರಬಹುದು ಎನ್ನುವುದು ನನ್ನ ಸಂಶಯವಾಗಿತ್ತು. ಬೇರೆ ವಿಷಯವನ್ನು ಚರ್ಚಿಸೋಣಾ. ಈ ವಿಷಯವನ್ನು ಇಲ್ಲಿಗೆ ಬಿಡೋಣಾ ಎಂದಿದ್ದಾರೆ.

ಬಿಜೆಪಿ ನಾಯಕರು ಸಹ ಇಂತಹ ಬಹಳಷ್ಟು ಹೇಳಿಕೆಗಳನ್ನು ನೀಡಿದ್ದಾರೆ. ರಾಜಕೀಯದಲ್ಲಿ ಇಂತಹ ಹೇಳಿಕೆಗಳು ಇದ್ದೇ ಇರುತ್ತದೆ. ನನ್ನದು ರಾಜಕೀಯ ಸ್ಟೇಟ್ಮೆಂಟ್ ಅಷ್ಟೇ. ಬಿಜೆಪಿ ನಾಯಕರು ಇಂಥಹ ಬಹಳಷ್ಟು ಹೇಳಿಕೆಯನ್ನು ನೀಡಿದ್ದಾರೆ ಎಂದು ತಮ್ಮ ಹೇಳಿಕೆ ಸಮರ್ಥನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!