Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಿನೇ ದಿನೇ ಕ್ಷೀಣಿಸುತ್ತಿರುವ ಲೀಲಾವತಿಯವರ ಆರೋಗ್ಯ : ನಟಿ ಆಸೆಯಂತೆ ಆಸ್ಪತ್ರೆ ಉದ್ಘಾಟಿಸಿದ ಡಿಕೆಶಿ

---Advertisement---

ಬೆಂಗಳೂರು: ಹಿರಿಯ ನಟಿ ಲೀಲಾವತಿ ಬೆಂಗಳೂರು ಹೊರವಲಯ ಸೋಲದೇವನಹಳ್ಳಿಯಲ್ಲಿ ನೆಲೆಸಿದಾಗಿನಿಂದಲೂ ಅಲ್ಲಿನ ಜನರಿಗೆ ಅನುಕೂಲವಾಗುವಂತ ಸಮಾಜಮುಖಿ ಕೆಲಸಗಳನ್ನೇ ಮಾಡುತ್ತಾ ಇದ್ದಾರೆ. ಈಗಾಗಲೇ ಪ್ರಾಥಮಿಕ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ. ಇದೀಗ ಪಶು ಸಂಗೋಪನ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ. ಇದರ ಉದ್ಘಾಟನೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ನೆರವೇರಿಸಿದ್ದಾರೆ.

ಲೀಲಾವತಿ ಅವರಿಗೆ ಪ್ರಾಣಿ, ಪಕ್ಷಿಗಳೆಂದರೆ ಬಲು ಪ್ರೀತಿ. ಅದಕ್ಕಾಗಿಯೇ ಸೋಲದೇವನಹಳ್ಳಿಯಲ್ಲಿ ಒಂದು ಪಶುಸಂಗೋಪನ ಆಸ್ಪತ್ರೆಯನ್ನು ಕಟ್ಟಿಸಿದ್ದಾರೆ. ಇಂದು ಅವರ ಕನಸಿನ ಆಸ್ಪತ್ರೆ ಉದ್ಘಾಟನೆಗೊಂಡಿದೆ. ಇದು ಲೀಲಾವತಿ ಅವರಿಗೆ ಇನ್ನಷ್ಟು ಸಂತಸ ನೀಡಿದೆ.

ಲೀಲಾವತಿಯವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತೀರಾ ಸಣ್ಣವಾಗಿದ್ದು, ಹೆಚ್ಚಿನ ಊಟ, ತಿಂಡಿ ತಿನ್ನುವುದಕ್ಕೂ ಕಷ್ಟವಾಗಿದೆ. ಹಿರಿಯ ನಟಿಯನ್ನು ನೋಡಲು ಸ್ಯಾಂಡಲ್ ವುಡ್ ನಟ ನಟಿಯರು ಸೋಲದೇವನಹಳ್ಳಿಯ ತೋಟದ ಮನೆಗೆ ಭೇಟಿ ನೀಡುತ್ತಿದ್ದಾರೆ. ಇತ್ತಿಚೆಗಷ್ಟೇ ಅರ್ಜುನ್ ಸರ್ಜಾ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದರು. ಬಳಿಕ ನಿನ್ನೆಯಷ್ಟೇ ನಟ ದರ್ಶನ್ ಕೂಡ ಲೀಲಾವತಿ ಅವರನ್ನು ಭೇಟಿ ಮಾಡಿ ಬಂದಿದ್ದಾರೆ.

ಹಿರಿಯ ನಟಿ ಅವರ ಮಹದಾಸೆ ಪಶುಸಂಗೋಪನೆಯ ಆಸ್ಪತ್ರೆಯಾಗಿತ್ತು. ಅವರ ಆರೋಗ್ಯ ಬೇರೆ ದಿನೇ ದಿನೇ ಕ್ಷೀಣಿಸುತ್ತಿದೆ. ಅವರ ಆಸೆಯಂತೆ ಸರ್ಕಾರವೂ ಸ್ಪಂದಿಸಿದ್ದು, ಬೆಂಗಳೂರಿನ ಥಣೀಸಂಧ್ರದ ಆಸ್ಪತ್ರೆಯನ್ನು ಸರ್ಕಾರ ಸೋಲದೇವನಹಳ್ಳಿಗೆ ಶಿಫ್ಟ್ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment