Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿ.ಓ.ಪಿ ಗಣೇಶ ಮೂರ್ತಿಗಳನ್ನು ಬಳಸಿದರೆ ಕಾನೂನು ಕ್ರಮ

Facebook
Twitter
Telegram
WhatsApp

 

ಚಿತ್ರದುರ್ಗ. ಸೆ.02: ಸರ್ಕಾರ ಸೂಚನೆಯಂತೆ ಪಿ.ಓ.ಪಿ ಮತ್ತು ರಾಸಾಯನಿಕ ಗುಣವುಳ್ಳ ವಸ್ತುಗಳನ್ನು ಬಳಸಿ ಗಣಪತಿ ವಿಗ್ರಹಗಳ ತಾಯಾರಿಕೆ, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯನ್ನು ನಿಷೇಧಿಸಲಾಗಿದೆ.

ಸಾರ್ವಜನಿಕರು ಪರಿಸರ ಸ್ನೇಹಿ, ಬಣ್ಣ ರಹಿತ, ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಬೇಕು. ಸಾರ್ವಜನಿಕವಾಗಿ ಮೂರ್ತಿ ಪ್ರತಿಷ್ಠಾಪನೆ ಮೊದಲು ಸಕ್ಷಮ ಪ್ರಾಧಿಕಾರ ಅಥವಾ ಇಲಾಖೆಗಳಿಂದ ಅನುಮತಿ ಪಡೆಯಬೇಕು. ಗಣೇಶ ಉತ್ಸವಗಳಲ್ಲಿ ಏಕ ಬಳಕೆ ಪ್ಲಾಸ್ಟಿಕನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸ್ವಚ್ಚತೆಯನ್ನು ಕಾಪಾಡುವುದು ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಪುರಸಭೆ ವಾಹನಕ್ಕೆ ನೀಡಬೇಕು.

ಹೊಳಲ್ಕೆರೆ ಪಟ್ಟಣದಲ್ಲಿನ ಗಣೇಶ ವಿಸರ್ಜನೆಗಾಗಿ ಪುರಸಭೆಯಿಂದ ತಾಲ್ಲೂಕು ಪಂಚಾಯತ್ ಹಿಂಭಾಗದಲ್ಲಿರುವ ಎನ್.ಇ.ಎಸ್ ಕಾಲೋನಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯೇ ಸ್ಥಳದಲ್ಲಿಯೇ ಗಣಪತಿ ವಿಗ್ರಹಗಳನ್ನು ವಿಸರ್ಜಿಸಬೇಕು.

ಆದೇಶವನ್ನು ಮೀರಿ ಪಿ.ಓ.ಪಿ ಮತ್ತು ರಾಸಾಯನಿಕ ಗುಣವುಳ್ಳ ವಸ್ತುಗಳನ್ನು ಬಳಸಿ ವಿಗ್ರಹಗಳನ್ನು ತಯಾರಿಸುತ್ತಿರುವುದು ಮತ್ತು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅಥವಾ ನಿಗಧಿತ ಸ್ಥಳದಲ್ಲಿ ಬಿಟ್ಟು ಬೇರೆ ಕಡೆ ವಿಸರ್ಜನೆ ಮಾಡುತ್ತಿರುವುದು ತಿಳಿದುಬಂದಲ್ಲಿ, ಮೂರ್ತಿಗಳನ್ನು ವಶಪಡಿಸಿಕೊಳ್ಳುವುದಲ್ಲದೇ ದಂಡ ಮತ್ತು ಕಾನೂನು ಕ್ರಮಕೈಗೊಳ್ಳಲಾಗುವುದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!