Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ ಸೆರೆ ಸಿಕ್ಕ ಚಿರತೆ ; ನಿಟ್ಟುಸಿರು ಬಿಟ್ಟ ಜನತೆ

---Advertisement---

ಬೆಂಗಳೂರು : ಕಳೆದ ಮೂರು ದಿನಗಳಿಂದ ಚಿರತೆಯೊಂದು ಬೆಂಗಳೂರಿನ ಜನಕ್ಕೆ ಆತಂಕವನ್ನೆ ತಂದೊಡ್ಡಿತ್ತು. ಜನ ಓಡಾಡುವುದಕ್ಕೂ ಭಯ ಪಡುತ್ತಿದ್ದರು. ಇದೀಗ ಆ ಭಯಕ್ಕೆ ಮುಕ್ತಿ ಸಿಕ್ಕಿದೆ. ಮೂರು ದಿನಗಳ ಬಳಿಕ ಚಿರತೆ ಸೆರೆಯಾಗಿದೆ. ಅರಣ್ಯಾಧಿಕಾರಿಗಳು ಚಿರತೆ ಹಿಡಿಯುವಲ್ಲಿ ಸಕ್ಸಸ್ ಆಗಿದ್ದಾರೆ.

 

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹೊರವಲಯದಲ್ಲಿ ಕಂಡ ಕೂಡಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಶುರು ಮಾಡಿದರು. ಸೂಕ್ಷ್ಮವಾಗಿ ಚಿರತೆಯನ್ನು ಕಂಡು ಹಿಡಿಯುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಆ ಚಿರತೆ ಕೂಡ ಅಷ್ಟು ಸುಲಭವಾಗಿ ಸಿಗಲಿಲ್ಲ. ಬೋನುಗಳನ್ನು ಹಾಕಿ ಚಿರತೆಗಾಗಿ ಅಧಿಕಾರಿಗಳು ಕಾದಿದ್ದರು‌. ಇದೀಗ ಚಿರತೆ ಸೆರೆಯಾಗಿದೆ.

 

ಬೋನ್ ಗಳು, ಬಲೆಗಳು ಸೇರಿದಂತೆ ಸಿಸಿಟಿವಿ ಕ್ಯಾಮಾರ ಕಣ್ಗಾವಲಲ್ಲಿ ಚಿರತೆಯ ಹುಡುಕಾಟ ಶುರು ಮಾಡಿದರು. ಡ್ರೋನ್ ಕ್ಯಾಮಾರ ಬಳಸಿದ್ದರು. ತಂತ್ರಜ್ಞಾನ ಬಳಕೆ ಸೇರಿದಂತೆ 30 ಸಿಬ್ಬಂದಿಗಳೊಂದಿಗೆ ಚಿರತೆಯ ಕಾರ್ಯಾಚರಣೆ ನಡೆದಿತ್ತು. ಸತತ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದರು.

ಕಡೆಗೂ ಇಂದು ಚಿರತೆ ಸೆರೆಯಾಗಿದೆ. ಚಿರತೆ ಹಿಡಿಯುವುದಕ್ಕೂ ಮುನ್ನ ಅರವಳಿಕೆ ಕೊಡುವುದಕ್ಕೆ ಪ್ರಯತ್ನ ನಡೆಸಲಾಗಿತ್ತು. ಆದರೆ ಆ ಸಮಯದಲ್ಲಿ ಅರವಳಿಕೆ ತಜ್ಞರಿಗೇನೆ ಚಿರತೆ ದಾಳಿ ನಡೆಸಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎಲ್ಲಾ ರಿಸ್ಕ್ ಗಳ ನಡುವೆ ಕಡೆಗೂ ಸೆರೆ ಹಿಡಿದಿದ್ದಾರೆ. ಚಿರತೆ ಬೋನಿಗೆ ಬಿದ್ದ ಕಾರಣ, ಜನ ಕೊಂಚ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...