Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ನ್ಯಾಯದಡಿ ಟಿಕೆಟ್ ನೀಡಲಿ : ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ,(ಏ.14) : ಭೋವಿ ಸಮುದಾಯದ ಕೆಲ ಶಾಸಕರಿಗೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಕ್ಷಗಳ ಮೇಲೆ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಭೋವಿ ಗುರುಪೀಠದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಹಾಗೂ ಗೂಳಿಹಟ್ಟಿ ಶೇಖರ್ ಅವರಿಗೆ ಟಿಕೆಟ್ ನೀಡದೆ ಕಡೆಗಣನೆ ಮಾಡಲಾಗಿದೆ.

ಕಾಂಗ್ರೆಸ್ ಪಕ್ಷದಿಂದ ಕಳೆದ ಭಾರೀ ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದ ಅಖಂಡ ಶ್ರೀನಿವಾಸ್ ಅವರಿಗೆ ಟಿಕೆಟ್ ನೀಡದೆ ಕಡೆಗಣನೆ ಮಾಡಲಾಗಿದೆ. ಇದು ಬೋವಿ ಸಮಾಜವನ್ನು ನಿರ್ಲಕ್ಷ್ಯ ಮಾಡಿದಂತಾಗಿದೆ. ಈ ಹಿಂದೆ 8-10 ಜನ ಬೋವಿ ಸಮುದಾಯದವರಿಗೆ ಟಿಕೆಟ್ ನೀಡುತ್ತಿದ್ದರು. ಅದೇ ರೀತಿ ಈ ಭಾರೀಯೂ ಸಮಾಜದವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಸಾಮಾಜಿಕ ನ್ಯಾಯದಡಿ ಟಿಕೆಟ್ ನೀಡುವಂತೆ ಆಗ್ರಹಿಸಿದ ಶ್ರೀಗಳು, ಒಂದು ವೇಳೆ ಭೋವಿ ಸಮುದಾಯವನ್ನು ಕಡೆಗಣಿಸಿದಲ್ಲಿ ಅಂತಹ ಪಕ್ಷಗಳನ್ನು ಸಮುದಾಯ ಕೈಬಿಡಲಿದೆ ಎಂದು ಎಚ್ಚರಿಸಿದರು.

ಭಾರತೀಯ ಜನತಾ ಪಕ್ಷದಿಂದ ಅರವಿಂದ ಲಿಂಬಾವಳಿ, ಗೂಳಿಹಟ್ಟಿ ಶೇಖರ್ ಅವರಿಗೆ ಟಿಕೆಟ್ ನೀಡಬೇಕು. ಅಖಂಡ ಶ್ರೀನಿವಾಸ್‍ಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು. ಇಲ್ಲವಾದಲ್ಲಿ ಬೋವಿ ಸಮಾಜದ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಭೋವಿ ಸಮಾಜದ ಅಧ್ಯಕ್ಷರಾದ ತಿಪ್ಪೇಸ್ವಾಮಿ, ಸಿಇಓ ಗೋವಿಂದಪ್ಪ, ಕಾರ್ಯದರ್ಶಿ ಲಕ್ಷ್ಮಣ್, ಮುಖಂಡರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಭೇಟಿ..ಅಭ್ಯರ್ಥಿ ಚಂದ್ರಪ್ಪಗೆ ಅನುಕೂಲವೆಂದ ಮಾಜಿ ಸಚಿವ ಆಂಜನೇಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಿಯಾಂಕ ಗಾಂಧಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

error: Content is protected !!