ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಹಾಸನ: ಅರಸಿಕೆರೆ ಶಾಸಕ ಶಿವಲಿಂಗೇಗೌಡ ಅವರು ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಸೇರುತ್ತಾರೆ ಎಂಬ ಗುಸಗುಸು ಇತ್ತು. ಇದರ ನಡುವೆ ಹೆಚ್ ಡಿ ರೇವಣ್ಣ ಅವರು ನಡೆಸಿದ್ದಾರೆ ಎನ್ನಲಾದ ಮಾತುಕತೆಯ ಆಡಿಯೋ ವೈರಲ್ ಆಗಿತ್ತು. ಈ ಬಗ್ಗೆ ರೇವಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಎರಡು ವರ್ಷದಿಂದ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಮನೆ ಬಾಗಿಲು ತಟ್ಟುತ್ತಲೇ ಇದ್ದಾರೆ. ಒಂದು ದಿನ ದೇವೇಗೌಡ ಅವರ ಮುಂದೆ ಎಲ್ಲಾ ಕುಳಿತಿದ್ದರು. ಆಗ ಒಬ್ಬರು ಫೋನ್ ಮಾಡಿ ಏನು ಸಾರ್ ರಾಮಸ್ವಾಮಿ ಇಲ್ಲೆ ಉಳಿದುಕೊಳ್ಳುತ್ತಾರೆ ಎಂದರು. ಕಾಂಗ್ರೆಸ್ ನವರು ಆತನನ್ನು ಒದ್ದು ಓಡಿಸಿರುವುದಕ್ಕೆ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ ಅಂತ ಇದೇ ಶಿವಲಿಂಗೇಗೌಡ ಹೇಳಿದ. ಭಗವಂತ ಒಳ್ಳೆಯದು ಮಾಡಲಿ. ಈತನನ್ನು ರಾಜಕೀಯವಾಗಿ ಮೇಲೆ ತರಲು ಏನೇನು ಶಕ್ತಿ ತುಂಬಬೇಕೋ ಅದೆಲ್ಲವನ್ನು ಮಾಡಿದ್ದೇವೆ. ಈಗ ಬೆಳೆದು ದೊಡ್ಡವನಾಗಿದ್ದಾನೆ.
ನೀನೆ ಸಾಕಿದ ಗಿಣಿ. ಹದ್ದಾಗಿ ಕುಕ್ಕಿತೆಲೋ ಎಂಬಂತೆ ಆಗಿದೆ ನಮ್ಮ ಸ್ಥಿತಿ. ಆಡಿಯೋ ರೆಕಾರ್ಡ್ ಮಾಡಿಕೊಂಡಿರುವುದು ನನಗೆ ಗೊತ್ತಿಲ್ಲ. ಆದ್ರೆ ಅದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಬೇಕಾದರೂ ಪ್ರಮಾಣ ಮಾಡಲಿ. ನಾನೇನಾದರೂ ಒಂದೇ ಒಂದು ಪದ ಎಡಿಟ್ ಮಾಡಿದ್ದರು, ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ ಎಂದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್