ಧರ್ಮಸ್ಥಳದ ಮಂಜುನಾಥನೇ ನೋಡಿಕೊಳ್ಳಲಿ : ಶಿವರಾಮೇಗೌಡರ ಆಡಿಯೋಗೆ ಹೆಚ್ ಡಿ ರೇವಣ್ಣ ಕ್ಲಾರಿಟಿ..!

suddionenews
1 Min Read

 

ಹಾಸನ: ಅರಸಿಕೆರೆ ಶಾಸಕ ಶಿವಲಿಂಗೇಗೌಡ ಅವರು ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಸೇರುತ್ತಾರೆ ಎಂಬ ಗುಸಗುಸು ಇತ್ತು. ಇದರ ನಡುವೆ ಹೆಚ್ ಡಿ ರೇವಣ್ಣ ಅವರು ನಡೆಸಿದ್ದಾರೆ ಎನ್ನಲಾದ ಮಾತುಕತೆಯ ಆಡಿಯೋ ವೈರಲ್ ಆಗಿತ್ತು. ಈ ಬಗ್ಗೆ ರೇವಣ್ಣ ಅವರೇ ಸ್ಪಷ್ಟನೆ ನೀಡಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ಎರಡು ವರ್ಷದಿಂದ ಶಿವಲಿಂಗೇಗೌಡ ಅವರು ಕಾಂಗ್ರೆಸ್ ಮನೆ ಬಾಗಿಲು ತಟ್ಟುತ್ತಲೇ ಇದ್ದಾರೆ. ಒಂದು ದಿನ ದೇವೇಗೌಡ ಅವರ ಮುಂದೆ ಎಲ್ಲಾ ಕುಳಿತಿದ್ದರು. ಆಗ ಒಬ್ಬರು ಫೋನ್ ಮಾಡಿ ಏನು ಸಾರ್ ರಾಮಸ್ವಾಮಿ ಇಲ್ಲೆ ಉಳಿದುಕೊಳ್ಳುತ್ತಾರೆ ಎಂದರು. ಕಾಂಗ್ರೆಸ್ ನವರು ಆತನನ್ನು ಒದ್ದು ಓಡಿಸಿರುವುದಕ್ಕೆ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ ಅಂತ ಇದೇ ಶಿವಲಿಂಗೇಗೌಡ ಹೇಳಿದ. ಭಗವಂತ ಒಳ್ಳೆಯದು ಮಾಡಲಿ. ಈತನನ್ನು ರಾಜಕೀಯವಾಗಿ ಮೇಲೆ ತರಲು ಏನೇನು ಶಕ್ತಿ ತುಂಬಬೇಕೋ ಅದೆಲ್ಲವನ್ನು ಮಾಡಿದ್ದೇವೆ. ಈಗ ಬೆಳೆದು ದೊಡ್ಡವನಾಗಿದ್ದಾನೆ.

ನೀನೆ ಸಾಕಿದ ಗಿಣಿ. ಹದ್ದಾಗಿ ಕುಕ್ಕಿತೆಲೋ ಎಂಬಂತೆ ಆಗಿದೆ ನಮ್ಮ ಸ್ಥಿತಿ. ಆಡಿಯೋ ರೆಕಾರ್ಡ್ ಮಾಡಿಕೊಂಡಿರುವುದು ನನಗೆ ಗೊತ್ತಿಲ್ಲ. ಆದ್ರೆ ಅದು ಸುಳ್ಳು ಎಂದು ಧರ್ಮಸ್ಥಳಕ್ಕೆ ಬಂದು ಬೇಕಾದರೂ ಪ್ರಮಾಣ ಮಾಡಲಿ. ನಾನೇನಾದರೂ ಒಂದೇ ಒಂದು ಪದ ಎಡಿಟ್ ಮಾಡಿದ್ದರು, ಆ ಧರ್ಮಸ್ಥಳದ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks