Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚುನಾವಣೆಗೆ ಡಾ.ಮಂಜುನಾಥ್ ಸ್ಪರ್ಧಿಸಲಿ, ಅವರಿಂದ ಪ್ರಧಾನಿಯವರಿಗೆ ಸಲಹೆ ಸಿಗುತ್ತೆ : ಪ್ರವೀಣ್ ಶೆಟ್ಟಿ

---Advertisement---

ಬೆಂಗಳೂರು: ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಡಾ. ಮಂಜುನಾಥ್ ಅವರು ತಮ್ಮ ಅಧಿಕಾರಾವಧಿ ಮುಗಿದು, ಈಗ ನಿವೃತ್ತಿಯಾಗಿದ್ದಾರೆ. ಇದರ ನಡುವೆ ಅವರನ್ನು ರಾಜಕೀಯಕ್ಕೆ ಕರೆತೆಉವ ಪ್ರಯತ್ನ ನಡೆಯುತ್ತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೇ ಅವರಿಗೆ ಟಿಕೆಟ್ ನೀಡುವುದಕ್ಕೆ ಬಿಜೆಪಿ ತಯಾರಿದೆ. ಇತ್ತಿಚೆಗಷ್ಟೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ವಿಚಾರದ ಬಗ್ಗೆ ತಿಳಿಸಿದ್ದರು. ಬಿಜೆಪಿಯವರೇ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ ಎಂದಿದ್ದರು.

 

ಇದೀಗ ಡಾ. ಮಂಜುನಾಥ್ ಅವರು ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ತವೀಣ್ ಶೆಟ್ಟಿ ಅವರು ಕೂಡ ಬೆಂಬಲ ನೀಡಿದ್ದಾರೆ. ರಾಜ್ಯದ ಯಾವುದೇ ಕ್ಷೇತ್ರದಿಂದ ಬೇಕಾದರೂ ಅವೆಉ ಸ್ಪರ್ಧೆ ಮಾಡಲಿ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಎಲ್ಲಾ ಕನ್ನಡ ಪರ ಸಂಘಟನೆಗಳು ಅವರಿಗಾಗಿ ಕೆಲಸ ಮಾಡುತ್ತೇವೆ. ಅತ್ಯಧಿಕ ಮತಗಳಿಂದ ಅವರನ್ನು ಗೆಲ್ಲಿಸಿಕೊಂಡು ಬರುತ್ತೇವೆ. ನಿವೃತ್ತಿಯಾಗಿ ಮನೆಯಲ್ಲಿರುವುದು ರಾಜ್ಯಕ್ಕೆ ಶೋಭೆಯಲ್ಲ. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿ, ನಿಮ್ಮ ಸೇವೆ ನಾಡಿಗೆ ಅತ್ಯವಶ್ಯಕವಾಗಿದೆ ಎಂದು ಎಲ್ಲರು ಒತ್ತಾಯಿಸುತ್ತಿದ್ದಾರೆ.

 

ಜಯದೇವ ಆಸ್ಪತ್ರೆಯನ್ನೇ ದೇಶವೇ ನೋಡುವಂತೆ ಮಾಡಿದ್ದಾರೆ. ದೇಶದ ಹಿತ ದೃಷ್ಟಿಯಿಂದ ಸೂಕ್ತವಾದ ಸಲಹೆಗಳನ್ನು ನೀಡುತ್ತಾರೆ. ಪ್ರಧಾನ ಮಂತ್ರಿಗಳಿಗೆ ಮತ್ತು ಸಂಸದರಿಗೆ ಸಲಹೆ ನೀಡುತ್ತಾರೆ. ಹೀಗಾಗಿ ಅವರು ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಇತ್ತಾಯಿಸುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.

 

ಜಯದೇವ ಆಸ್ಪತ್ರೆಯನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದು ಡಾ. ಮಂಜುನಾಥ್ ಅವರು. ಆದರೆ ಈಗ ನಿವೃತ್ತಿಯಾಗಿದ್ದಾರೆ. ಸರ್ಕಾರ ಇನ್ನಷ್ಟು ಅವಧಿ‌ ಮುಂದುವರೆಸಿದ್ದರು ಅವರು ಖುಷಿಯಿಂದ ಸೇವೆ ಮಾಡುತ್ತಿದ್ದರು. ಆದರೆ ಆ ಜಾಗಕ್ಕೆ ಈಗ ಬೇರೆಯವರನ್ನು ತಂದು ಕೂರಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment