Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರೋಪ ಮುಕ್ತರಾಗುವ ತನಕ ಈಶ್ವರಪ್ಪ ರಾಜೀನಾಮೆ ನೀಡಲಿ : ಬಿ ಕೆ ಹರಿಪ್ರಸಾದ್ ಆಗ್ರಹ

Facebook
Twitter
Telegram
WhatsApp

ಬೆಂಗಳೂರು: ಗುತ್ತಿಗೆದಾರರಿಂದ 40% ಕಮಿಷನ್ ತೆಗೆದುಕೊಳ್ಳುವ ವಿಚಾರ ಸಂಬಂಧ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ 40% ಕಮೀಷನ್ ವಿಚಾರ ಮುನ್ನೆಲೆಗೆ ಬಂದಿದೆ. ಇದರಿಂದ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯ ಕೇಳಿ ಬಂದಿದೆ.

ಗುತ್ತಿಗೆದಾರನಿಂದ ಸಚಿವ ಈಶ್ವರಪ್ಪ ಕಮಿಷನ್ ಕೇಳಿದ ಆರೋಪದ ಬಗ್ಗೆ ಇಂದು ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಮಾತನಾಡಿದ್ದು, 40 ಪರ್ಸೆಂಟ್ ಕಮಿಷನ್ ಬಗ್ಗೆ ಪರಿಷತ್ ನಲ್ಲಿ ಚರ್ಚೆಗೆ ಕೇಳಿದ್ದೇವೆ ಎಂದಿದ್ದಾರೆ.

ಇನ್ನು ದಿನದಿಂದ ದಿನಕ್ಕೆ ಕಮಿಷನ್ ಆರೋಪ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಇದನ್ನ ಗಂಭೀರವಾಗಿ ತೆಗೆದುಕೊಂಡಿಲ್ಲ. ಸಚಿವ ಕೆ ಎಸ್ ಈಶ್ವರಪ್ಪ ತಕ್ಷಣ ರಾಜೀನಾಮೆ ನೀಡಬೇಕು. ಆರೋಪ ಮುಕ್ತರಾಗುವ ತನಕ ಸಂಪುಟದಲ್ಲಿ ಇರಬಾರದು ಎಂದು ಬಿ ಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ಇದೇ ವಿಚಾರಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ಈ ಹಿಂದೆ ಈಶ್ವರಪ್ಪ ಅವರೇ ಗವರ್ನರ್ ಗೆ ಪತ್ರ ಬರೆದಿದ್ದರು. ಗುತ್ತಿಗೆದಾರರು ಕೂಡ ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ. 40% ಕಮಿಷನ್ ಬಗ್ಗೆ ಆರೋಪಿಸಿಯೇ ಪತ್ರ ಬರೆದಿದ್ದಾರೆ. ಕೇವಲ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಮಾತ್ರವಲ್ಲ, ಇಡೀ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!