Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಮ್ಮನೆ ಮಾತನಾಡುವುದನ್ನು ಎಚ್‌ಡಿಕೆ ಬಿಡಲಿ; ಕೇಂದ್ರ ಸಚಿವ ನಾರಾಯಣಸ್ವಾಮಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.08) : ಮಾಜಿ ಸಿಎಂ ಎಚ್.ಡಿ.ಕುಮಾರ ಸ್ವಾಮಿ ಅಧಿಕಾರದಲ್ಲಿದ್ದಾಗ ಒಂದು ಮಾತನಾಡೋದು ಇಲ್ಲದಾಗ ಮತ್ತೊಂದು ಮಾತನಾಡುವುದನ್ನು ಬಿಡಬೇಕೆಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತಿರುಗೇಟು ನೀಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಕುಮಾರಸ್ವಾಮಿ ಅವರಿಗೆ ಆರ್‌ಎಸ್‌ಎಸ್ ಬಗ್ಗೆ ಬಹುಶಃ ಸರಿಯಾಗಿ ತಿಳಿಯದ ಕಾರಣ ಈ ರೀತಿ ಮಾತನಾಡುತ್ತಿದ್ದಾರೆ. ಆರ್‌ಎಸ್‌ಎಸ್‌ಗೂ ರಾಜಕಾರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ ಎಂದರು.

ಅಧಿಕಾರದ ವ್ಯವಸ್ಥೆಯಲ್ಲಿ ಆರ್‌ಎಸ್‌ಎಸ್ ಪಾತ್ರ ಇರೋದಿಲ್ಲ. ಈಗ ಇಷ್ಟೆಲ್ಲ ಮಾತನಾಡುವವರಿಗೆ ಬಿಜೆಪಿ ಜೊತೆ ಅಧಿಕಾರ ಹಚ್ಚಿಕೊಂಡಾಗ ಇವರು ಆರ್‌ಎಸ್‌ಎಸ್ ಅಂತ ಗೊತ್ತಿರಲಿಲ್ವಾ ಎಂದು ಪ್ರಶ್ನಿಸಿದರು.

ಉತ್ತರಪ್ರದೇಶದ ಲಿಖೀಂಪುರದ ಘಟನೆ ತನಿಖೆ ಆಗಬೇಕು. ಯಾರೇ ತಪ್ಪು ಮಾಡಿದ್ದರು ಸಹ ಅವರು ಶಿಕ್ಷೆ ಅನುಭವಿಸುತ್ತಾರೆ ಎಂದು ತಿಳಿಸಿದರು.

ನಿತ್ಯವು ದೇಶದಲ್ಲಿ ಐಟಿ ರೇಡ್‌ಗಳು ಆಗುತ್ತವೆ. ಮಾಜಿ ಸಿಎಂ ಬಿಎಸ್‌ವೈ ಆಪ್ತರ ಮೇಲೆ ಐಟಿ ದಾಳಿ ಬಗ್ಗೆ ಈಗಾಗಲೇ ಖುದ್ದು ಯಡಿಯೂರಪ್ಪ, ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದಕ್ಕೆ ರಾಜಕಾರಣದ ಸಂಬಂಧ ಕಲ್ಪಿಸಬೇಡಿ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!