ನನ್ನ ವೈಯಕ್ತಿಕ ತೇಜೋವಧೆ ಮಾಡುವವರು ತಾಕತ್ತಿದ್ದರೆ ಸಾಬೀತು ಮಾಡಲಿ : ಸಿ.ಮಹಲಿಂಗಪ್ಪ ಸವಾಲು

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 03 : ಸಾರ್ವಜನಿಕವಾಗಿ ನನ್ನ ಹೆಸರಿಗೆ ಕೆಲವರು ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆಂದು ಜಿಲ್ಲಾ ಯಾದವ ಗೊಲ್ಲರ ಸಂಘದ ಅಧ್ಯಕ್ಷ ಸಿ.ಮಹಲಿಂಗಪ್ಪ ತಮ್ಮ ವಿರುದ್ದ ಅಪ ಪ್ರಚಾರದಲ್ಲಿ ತೊಡಗಿರುವವರಿಗೆ ತಿರುಗೇಟು ನೀಡಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘದ ಕೆಲವು ಸದಸ್ಯರು ಹಾಗೂ ಸಂಘಕ್ಕೆ ಸಂಬಂಧವೇ ಇಲ್ಲದ ಕೆಲವರು ತೇಜೋವಧೆಗಾಗಿ ನನ್ನ ಬಗ್ಗೆ ಇಲ್ಲ ಸಲ್ಲದ ಆಪಾದನೆಗಳನ್ನು ಹೊರಿಸುತ್ತಿದ್ದಾರೆ. ಇದಕ್ಕೆ ಯಾರು ಕಿವಿಗೊಡಬಾರದೆಂದು ಸಿ.ಮಹಲಿಂಗಪ್ಪ ಮನವಿ ಮಾಡಿದರು.

ಕೇಂದ್ರ ಮಂತ್ರಿಯಾಗಿದ್ದ ನಾರಾಯಣಸ್ವಾಮಿರವರು ಐವತ್ತು ಲಕ್ಷ ರೂ. ರಾಜ್ಯಸಭೆ ಸದಸ್ಯ ಜಿ.ಸಿ.ಚಂದ್ರಶೇಖರ್ ಇಪ್ಪತ್ತು ಲಕ್ಷ ರೂ. ಸಂಸದ ಕೆ.ಎಸ್.ನವೀನ್ ಹತ್ತು ಲಕ್ಷ ರೂ.ಗಳನ್ನು ಸಂಘದ ಕಟ್ಟಡಕ್ಕೆ ಮಂಜೂರು ಮಾಡಿದ್ದಾರೆ. ನಿರ್ಮಿತಿ ಕೇಂದ್ರದವರು ಕಟ್ಟಡ ಕಟ್ಟಿಸುತ್ತಿರುವುದರಿಂದ ಅನುದಾನ ನೇರವಾಗಿ ಸಂಘಕ್ಕೆ ಬರುವುದಿಲ್ಲ. ವಾಸ್ತವ ಅರಿಯದವರು ಐದರಿಂದ ಹತ್ತು ಕೋಟಿ ರೂಪಾಯಿ ದುರುಪಯೋಗವಾಗಿದೆಯೆಂದು ಎಲ್ಲಾ ಕಡೆ ಹೇಳಿಕೊಂಡು ತಿರುಗಾಡುತ್ತಿರುವುದು ಸತ್ಯಕ್ಕೆ ದೂರವಾದುದು. ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಸರ್ವ ಸದಸ್ಯರ ಸಭೆ ಕರೆಯುತ್ತೇನೆ. ತಾಕತ್ತಿದ್ದರೆ ಅಲ್ಲಿ ಬಂದು ಹಣ ದುರಪಯೋಗವಾಗಿರುವುದನ್ನು ಸಾಬೀತುಪಡಿಸಲಿ ಎಂದು ಸಿ.ಮಹಲಿಂಗಪ್ಪ ಸವಾಲು ಹಾಕಿದರು.

ಜಿಲ್ಲಾ ಯಾದವ ಗೊಲ್ಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಆನಂದ್, ಸಂಘಟನಾ ಕಾರ್ಯದರ್ಶಿ ವೆಂಕಟೇಶ್‍ಯಾದವ್, ಖಜಾಂಚಿ ಎಸ್.ಟಿ.ಪಲ್ಗುಣೇಶ್ವರ ನಿರ್ದೇಶಕರುಗಳಾದ ಗೋವಿಂದಪ್ಪ, ರಂಗಸ್ವಾಮಿ, ಪ್ರಕಾಶ್, ಚಂದ್ರಣ್ಣ, ಟಿ.ತಿಮ್ಮಪ್ಪ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

suddionenews

Recent Posts

ಹಿರಿಯೂರಿನಲ್ಲಿ ಕಾಂಗ್ರೆಸ್ ಮುಖಂಡರ ಬಡಿದಾಟ

ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…

9 hours ago

ಚಿತ್ರದುರ್ಗ | ಜಿ.ಪಿ.ಉಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…

9 hours ago

ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ : ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್

  ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…

10 hours ago

ಚಿತ್ರದುರ್ಗಕ್ಕೆ ಆಗಮಿಸಿದ ವಿಕಲಚೇತನರ ಬೈಕ್ ರ‌್ಯಾಲಿ : ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

10 hours ago

ಅಲ್ ರೆಹಮಾನ್ ಆರ್ಗನೈಜೆಷನ್ ವತಿಯಿಂದ ರಂಜಾನ್ ರೇಷನ್ ಕಿಟ್ ವಿತರಣೆ

ಸುದ್ದಿಒನ್, ಹರಿಹರ, ಮಾರ್ಚ್. 19 :  ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…

10 hours ago

ಸುನಿತಾ ವಿಲಿಯಮ್ಸ್ ಅವರ ಆತ್ಮಸ್ಥೈರ್ಯ, ತಾಳ್ಮೆ ಯುವಪೀಳಿಗೆಗೆ ಮಾದರಿ : ಡಾ.ಕೆ.ಸೌಮ್ಯಾ ಮಂಜುನಾಥ್

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…

11 hours ago