ಸಿದ್ದರಾಮಯ್ಯನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ : ಡಿ.ದುರುಗೇಶ್

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ,(ಮಾ.24) :  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಯನ್ನು ನಡೆಸಲಿ ಅವರನ್ನು ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ಅಭಿಮಾನಿ ಬಳಗ ತಿಳಿಸಿದೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ, ಒಕ್ಕೂಟದ ಡಿ.ದುರುಗೇಶ್ ಸಿದ್ದರಾಮಯ್ಯನವರು ಜಾತ್ಯಾತೀತ ನಾಯಕರಾಗಿದ್ದಾರೆ ಅವರನ್ನು ಎಲ್ಲಾ ವರ್ಗದದವರು ಸಹಾ ಆಧರಿಸುತ್ತಾರೆ ಅವರನ್ನು ಯಾರು ಸಹಾ ಅಲ್ಲಗೆಳೆಯುವುದಿಲ್ಲ, ಇತಂಹ ನಾಯಕರಿಗೆ ಸ್ಪರ್ಧೆ ಮಾಡಲು ಜಾಗ ಇಲ್ಲ ಎನ್ನವುದು ಸರಿಯಲ್ಲ ಈ ಹಿನ್ನಲೆಯಲ್ಲಿ ಸಿದ್ದರಾಮಯ್ಯ ನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಅವರು ಸ್ಪರ್ದೆ ಮಾಡಿದರೆ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ನೀಡಲಾಗುವುದು ಎಂದರು.

ರಾಜ್ಯದ ಮುಖ್ಯಮಂತ್ರಿಗಳಾಗಿದ್ಧಾಗ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಹೆಚ್ಚಿನ ರೀತಿಯಲ್ಲಿ ಸಹಾಯವನ್ನು ಮಾಡಿದ್ದಾರೆ. ಚಿತ್ರದುರ್ಗದಲ್ಲಿಯೂ ಈ ವರ್ಗದ ಜನತೆ ಹೆಚ್ಚಾಗಿದ್ದಾರೆ ಇದರಿಂದ ಅವರು ಇಲ್ಲಿ ಸ್ಪರ್ಧೆ ಮಾಡಿದರೆ ಗೆಲುವು ಖಂಡಿತ, ಪಕ್ಷದ ವರಿಷ್ಠರು ಸಹಾ ಇದರ ಬಗ್ಗೆ ಆಲೋಚನೆ ಮಾಡಿ ಸಿದ್ದರಾಮಯ್ಯನವರಿಗೆ ಚಿತ್ರದುರ್ಗದಲ್ಲಿ ಸ್ಫರ್ಧೆ ಮಾಡಲು ಅವಕಾಶವನ್ನು ನೀಡಬೇಕೆಂದು ಪಕ್ಷದ ವರಿಷ್ಠರಲ್ಲಿ ದುರುಗೇಶಪ್ಪ ಮನವಿ ಮಾಡಿದರು.

ಬಿ.ಟಿ.ಜಗದೀಶ್ ಮಾತನಾಡಿ, ಸಿದ್ದರಾಮಯ್ಯ ನವರು ರಾಜ್ಯದ 224 ಕ್ಷೇತ್ರಗಳಲ್ಲಿಯೂ ತಮ್ಮ ವರ್ಚಸ್ಸನ್ನು ಹೊಂದಿದ್ದಾರೆ. ಎಲ್ಲಿ ಬೇಕಾದರೂ ನಿಲ್ಲಬಹುದಾಗಿದೆ. ಚುಣಾವಣೆಯ ಸಮಯದಲ್ಲಿ ರಾಜಕೀಯ ಪಕ್ಷದವರು ಬೇರೆಯವರ ಮೇಲೆ ಕೆಸರನ್ನು ಎರೆಚಾಡುವ ಕಾರ್ಯವನ್ನು ಮಾಡುತ್ತಿದ್ದಾರೆ. ಇವರ ಬಗ್ಗೆ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಇಂದು ಖಂಡನೀಯ. ಸಿದ್ದರಾಮಯ್ಯ ಒಬ್ಬ ಸಮರ್ಥ ನಾಯಕರಾಗಿದ್ದಾರೆ.

ವಿಧಾನಸಭೆಯಲ್ಲಿ ಇವರು ಇಲ್ಲದಿದ್ದರೆ ಸಭೆ ಕಳೆ ಇರುವುದಿಲ್ಲ, ಎಲ್ಲಾ ಕ್ಷೇತ್ರಗಳಲ್ಲಿಯೂ ಸಹಾ ಸಿದ್ದರಾಮಯ್ಯ ನವರ ಅಭೀಮಾನಿಗಳು ಇದ್ದಾರೆ. ಚಿತ್ರದುರ್ಗದಲ್ಲಿ ಅವರು ಸ್ಪರ್ದೆ ಮಾಡಿದರೆ ಎಲ್ಲರು ಒಟ್ಟಾಗಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲುವನ್ನು ಸಾಧಿಸುವಂತೆ ನೋಡಿಕೊಳ್ಳಲಾಗುವುದು ಎಂದರು.

ಕೂರಚ ಸಮಾಜದ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿ,  ಸಿದ್ದರಾಮಯ್ಯ ನವರು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಸ್ಫರ್ದೆ ಮಾಡಿದರೆ ನಮ್ಮ ಅದೃಷ್ಟ, ಅವರು ಅದಿಕಾರದ ಅವಧಿಯಲ್ಲಿ ಮಾಡಿದ ಕೆಲಸವನ್ನು ಈಗಿನ ಬಿಜೆಪಿ ಸರ್ಕಾರ ಮಾಡಿಲ್ಲ, ಚಿತ್ರದುರ್ಗಕ್ಕೆ ಬಂದರೆ ಅವರನ್ನು ಗೆಲ್ಲಿಸಿಕಳುಹಿಸುತ್ತೇವೆ ಎಂದರು.
ಗೋಷ್ಟಿಯಲ್ಲಿ ಕುರುಬ ಸಮಾಜದ ಅಧ್ಯಕ್ಷ ಶ್ರೀರಾಮ್, ಈಡಿಗ ಸಮಾಜದ ಸ್ವಾಮಿ, ನಗರಸಭೆಯ ಮಾಜಿ ಅಧ್ಯಕ್ಷ ಮಂಜಪ್ಪ, ಮಾಲೇಶ್, ಛಲವಾದಿ ಸಮಾಜದ ರವಿ ಪೂಜಾರ್ ಭಾಗವಹಿಸಿದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago