ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.12 : : ಇಸ್ರೇಲ್-ಹಮಾಸ್ ನಡುವೆ ನಡೆಯುತ್ತಿರುವ ಯುದ್ದ ಕೊನೆಗೊಂಡು ಶಾಂತಿ ನೆಲೆಸಲಿ ಎಂದು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಯೂಮನ್ ರೈಟ್ಸ್ ನಿಂದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪ್ರಾರ್ಥನೆ ಸಲ್ಲಿಸಲಾಯಿತು.
ಯುದ್ದದಿಂದ ಮಹಿಳೆಯರ ಮಾನಭಂಗ, ಪುಟ್ಟ ಮಕ್ಕಳ ಹತ್ಯೆ ಕ್ಷಮಿಸಲಾಗದು. ದಯಾಮಯನಾದ ಏಸು ಅಲ್ಲಿನ ಉಗ್ರರ ಮನಸ್ಸು ಪರಿವರ್ತನೆಗೊಳಿಸಲಿ. ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ಅಮಾಯಕರು, ಮುಗ್ದರು, ಶೋಷಣೆಗೊಳಗಾಗುತ್ತಿದ್ದಾರೆ. ವಿಶ್ವಸಂಸ್ಥೆ ಬಿಗಿ ನಿಲುವು ತಾಳಿ ಇಸ್ರೇಲ್-ಹಮಾಸ್ ಯುದ್ದ ವನ್ನು ನಿಲ್ಲಿಸಬೇಕು. ಚಿಕ್ಕ ರಾಷ್ಟ್ರ ಇಸ್ರೇಲ್ ಶಕ್ತಿಶಾಲಿಯಾಗಿ ಬೆಳೆದಿರುವುದರಿಂದ ಹಮಾಸ್ ಉಗ್ರರಿಗೆ ಪ್ರತ್ಯುತ್ತರ ನೀಡುತ್ತಿದೆ. ಆದರೂ ಯುದ್ದ ಎಂದ ಮೇಲೆ ಏನು ಅರಿಯದ ಮುಗ್ದರ ಜೀವ ಹರಣವಾಗುತ್ತದೆ. ಶಾಂತಿಧೂತನಾದ ಏಸು ಯುದ್ದವನ್ನು ಅಂತ್ಯಗೊಳಿಸಿ ನೆಮ್ಮದಿ ನೆಲೆಸುವಂತೆ ಪ್ರೇರೇಪಿಸಲಿ ಎಂದು ಪ್ರಾರ್ಥಿಸಲಾಯಿತು.
ಯುನೈಟೆಡ್ ಕ್ರಿಶ್ಚಿಯನ್ ಫೋರಂ ಯೂಮನ್ ರೈಟ್ಸ್ ಜಿಲ್ಲಾಧ್ಯಕ್ಷ ಫಾದರ್ ಸಜ್ಜಿಜಾರ್ಜ್, ಪ್ರಧಾನ ಕಾರ್ಯದರ್ಶಿ ರೆವೆರಂಡ್ ಫಾದರ್ ಎಂ.ಎಸ್.ರಾಜು ಇನ್ನು ಮೊದಲಾದವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್