Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಹುಕಾರ್ ಗೆ ಅವಕಾಶ ದೊರೆಯಲಿ : ಕುರ್ಚಿ ಕದನದಲ್ಲಿ ಜಾರಕಿಹೊಳಿ ಹೆಸರೇಳಿದ ಆಂಜನೇಯ

---Advertisement---

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕದನ ಜೋರಾಗಿಯೇ ಇದೆ. ಸರ್ಕಾರ ರಚನೆಯಾಗಿ ಎರಡೂವರೆ ವರ್ಷವಾಗ್ತಿದೆ. ಅತ್ತ ಸಿದ್ದರಾಮಯ್ಯ ಅವರು ದಾಖಲೆಯನ್ನು ಇತಿಹಾಸದ ಪುಟದಲ್ಲಿ ಬರೆದಾಗಿದೆ. ಇದಾದ ಮೇಲಾದ್ರು ಮುಖ್ಯಮಂತ್ರಿಯಾಗುವ ಅವಕಾಶ ನನಗೆ ಸಿಗಬಹುದಾ ಅಂತ ಡಿಕೆ ಶಿವಕುಮಾರ್ ಕಾಯ್ತಿದ್ದಾರೆ. ಅದಕ್ಕಾಗಿಯೇ ವರಿಷ್ಠರ ಭೇಟಿಗೆ ದೆಹಲಿಗೂ ತೆರಳಿದ್ದಾರೆ. ಈ ರೀತಿ ಬಡೆಯುತ್ತಿರುವ ಕುರ್ಚಿ ಕದನದ ವಿಚಾರ ನಡುವೆ ಸತೀಶ್ ಜಾರಕಿಹೊಳಿ ಅವರ ಹೆಸರು ಮುನ್ನಲೆಗೆ ಬಂದಿದೆ.

ಚಿತ್ರದುರ್ಗದಲ್ಲಿ ಮಾತನ್ನಾಡಿರುವ ಮಾಜಿ ಸಚಿವ ಹೆಚ್ ಆಂಜನೇಯ, ದೊರೆಯಾಗುವ ಅವಕಾಶ ಸತೀಶ್ ಜಾರಕಿಹೊಳಿಗೆ ಸಿಗಲಿ ಎಂದಿದ್ದಾರೆ. ಅವರು ಎಲ್ಲಿಯೆ ಹೋದ್ರು ಮುಂದಿನ ಸಿಎಂ ಅಂತ ಜನ ಕೂಗ್ತಾರೆ. ಸಿದ್ದರಾಮಯ್ಯ ಅವರು ಸಿಎಂ ಆಗೋದಕ್ಕೆ ಜಾರಕಿಹೊಳಿ ಸಂಘಟಿಸಿದ್ದರು. ಸಿದ್ದರಾಮಯ್ಯ ಅವರದ್ದು ಮುಖ್ಯಮಂತ್ರಿಯಾಗಿ ಈ ಅವಧಿ ಪೂರ್ಣವಾಗಲಿ. ಆದೃ ಸಿದ್ದರಾಮಯ್ಯ ನಂತರದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಫೋಕಸ್ ಮಾಡಲಿ ಎಂದು ಜಾರಕಿಹೊಳಿ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಸಾಹುಕಾರಿಕೆ ಜೊತೆಗೆ ಹೃದಯ ಶ್ರೀಮಂತಿಕೆ ಬಹಳ ಮುಖ್ಯ. ಅದೆಲ್ಲವೂ ಇರುವ ಸತೀಶ್ ಜಾರಕಿಹೊಳಿ ಅವರು ಈ ಕಾರ್ಯಕ್ರಮಕ್ಕೆ ಬಂದಿರೋದು ದೊಡ್ಡ ಶಕ್ತಿ. ಸಮುದಾಯವನ್ನ ಮುಂದಿನ ದಿನಗಳಲ್ಲಿ ಇನ್ನಷ್ಟು ಗಟ್ಟಿಗೊಳಿಸಿ, ರಾಜಕೀಯವಾಗಿ, ಸಾಮಾಜಿಕವಾಗಿ ಇನ್ನಷ್ಟು ಸೌಲಭ್ಯಗಳನ್ನು ನೀಡುವ ಮೂಲಕ ಅಭಿವೃದ್ಧಿಗೆ ಈಗಾಗಲೇ ಸಾಕಷ್ಟು ಶ್ರಮಿಸಿದ್ದಾರೆ. ಮುಂದೆ ಇನ್ನು ಶ್ರಮಿಸಬೇಕು ಎಂದು ಸತೀಶ್ ಜಾರಕಿಹೊಳಿ ಅವರನ್ನ ಹಾಡಿ ಹೊಗಳಿದ್ದಾರೆ. ಸದ್ಯಕ್ಕೆ ಸಿಎಂ ಕುರ್ಚಿ ಕದನದಲ್ಲಿ ನಾ ಕೊಡೆ ನೀ ಬಿಡೆ ಅನ್ನೋ ಯುದ್ಧ ನಡೆಯುತ್ತಿದೆ. ಇದರ ನಡುವೆ ಸತೀಶ್ ಜಾರಕಿಹೊಳಿ ಅವರ ಹೆಸರನ್ನ ಮುನ್ನಲೆಗೆ ತಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...