Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೌಲ್ಯಯುತ ಜೀವನಕ್ಕೆ ಮಹಾತ್ಮರ ತತ್ವಾದರ್ಶ ಪಾಲಿಸೋಣ : ಎಂ.ನಾಸಿರುದ್ದೀನ್

---Advertisement---

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17 : ನಾವು ಮೌಲ್ಯಯುತ ಜೀವನ ನಡೆಸಲು ಮಹಾತ್ಮರ ಜೀವನ, ತತ್ವಾದರ್ಶಗಳನ್ನು ಅನುಸರಣೆ ಮಾಡಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್‌ನಲ್ಲಿ ಗುರುವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಾತ್ಮರ ಜೀವನ ಮತ್ತು ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು ನಮ್ಮ ಉತ್ತಮ ಬದುಕಿಗೆ ಪ್ರೇರಣೆ ನೀಡುತ್ತವೆ ಎಂದರು.

ವಾಲ್ಮೀಕಿ ರಚಿಸಿದ ರಾಮಾಯಣ ನಮ್ಮ ನೆಲದ ಮೊದಲ ಮಹಾಕಾವ್ಯವಾಗಿದ್ದು ಅವರು ತಾತ್ವಿಕತೆ, ಆದರ್ಶ, ಸಮನ್ವಯತೆಯನ್ನೊಳಗೊಂಡ ಕವಿಯಾಗಿದ್ದಾರೆ. ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ದಾರ್ಶನಿಕರ ಜೀವನ ಮೌಲ್ಯಗಳನ್ನು ತಿಳಿಸುವುದರ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿ ಭವಿಷ್ಯದ ಉತ್ತಮ ಜೀವನ ನಡೆಸಲು ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.

ಉಪ ಪ್ರಾಚಾರ್ಯ ಅಶ್ವಥ್ ನಾರಾಯಣ, ಹಿರಿಯ ಉಪನ್ಯಾಸಕರಾದ ಎಸ್.ಸಿ.ಪ್ರಸಾದ್, ಎಸ್.ಜ್ಞಾನೇಶ್ವರ, ತಿಪ್ಪೇಸ್ವಾಮಿ, ಎಚ್.ಗಿರಿಜಾ, ಉಪನ್ಯಾಸಕರಾದ ಆರ್.ನಾಗರಾಜು, ಎಸ್.ಬಸವರಾಜು, ನಿತ್ಯಾನಂದ, ಸಿದ್ದೇಶಿ, ಲೀಲಾವತಿ, ಶಿವಲೀಲಾ, ಪದ್ಮ, ಅರ್ಜುಮಂದ್ ಬಾನು, ರಂಗಸ್ವಾಮಿ, ತಾಂತ್ರಿಕ ಸಹಾಯಕ ಅವಿನಾಶ್, ಅಧೀಕ್ಷಕಿ ಗೀತಾ ಮತ್ತು ಸಿಬ್ಬಂದಿ ವರ್ಗದವರು ಇದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment