Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ ಜಿಲ್ಲೆಯನ್ನು ಕ್ಷಯರೋಗದಿಂದ ಮುಕ್ತಿಯಾಗಿಸೋಣ: ಡಾ ಇಂದ್ರಾಣಿ

---Advertisement---

 

ಸಿರಿಗೇರಿ: ಕ್ಷಯರೋಗಿಯು ಚಿಕಿತ್ಸೆ ಪಡೆಯದೆ ಇತರರ ಬಳಿ ಕೆಮ್ಮಿದಾಗ ಅಥವಾ ಸೀನಿದಾಗ ಹತ್ತಿರವಿರುವವರಿಗೆ ರೋಗ ಹರಡುವ ಸಾಧ್ಯತೆ ಇದ್ದು ಸೂಕ್ತ ಮುಂಜಾಗೃತೆ ವಹಿಸಿ ರೋಗ ನಿಯಂತ್ರಣಕ್ಕೆ ಕೈಜೊಡಿಸಿ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ ಇಂದ್ರಾಣಿ ತಿಳಿಸಿದರು.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಸಂಸ್ಥೆ ಬೆಂಗಳೂರು ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಿರಿಗೇರಿ ರವರ ಸಹಬಾಗಿತ್ವದಲ್ಲಿ ಆಯೋಜಿಸಿದ್ದ ಎಸ್‌ಎಫ್‌ಟಿ ಅಡಿ ಉಚಿತ ಆರೋಗ್ಯ ತಪಾಸಣೆ ಹಾಗೂ ಕ್ಷಯ ರೋಗದ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ತಪಾಸಣಾ ಶಿಬಿರ ಹಾಗೂ ಕ್ಷಯರೋಗ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಸ್ತುತ ಸಿರಿಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 22 ಜನ ಕ್ಷಯರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಜನತೆ ಆತಂಕ ಪಡಬೇಕಾಗಿಲ್ಲ ಇದಕ್ಕೆ ಬೇಕಾದ ಚಿಕಿತ್ಸೆಯನ್ನು ಉಚಿತವಾಗಿ ನೇರ ನಿಗಾವಣೆ ಮೂಲಕ ಒದಗಿಸುವ ಮೂಲಕ ಒದಗಿಸಿ ಗುಣಪಡಿಸಲಾಗುತ್ತಿದೆ, ರೋಗಿಯು ಸಾರ್ವಜನಿಕರ ಸ್ಥಳದಲ್ಲಿ, ಮನೆಯಲ್ಲಿ ಅಥವಾ ಇತರರ ಬಳಿ ಮಾತನಾಡುವ ವೇಳೆ ಕೆಮ್ಮು, ಅಥವಾ ಶೀನು ಬಂದಲ್ಲಿ ಶುದ್ಧವಾದ ಬಟ್ಟೆಯನ್ನು ಬಾಯಿಗೆ ಅಡ್ಡಲಾಗಿ ಬಳಸಿ ಎಂದು ಸಲಹೆ ನೀಡಿ, ಪ್ರಶಿಕ್ಷಣಾರ್ಥಿ ಖುರ್ಶಿದ್ ಬೇಗಂ ಸಿರಿಗೇರಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಇಲ್ಲಿನ ಜನರ ಬಳಿ ತೆರಳಿ ಕ್ಷಯರೋಗದ ಮಾಹಿತಿಯೊಂದಿಗೆ ಅರಿವು ಮೂಡಿಸುವಂತಹ ಕಾರ್ಯ ಮಾಡುತ್ತಿದ್ದು, ಸಾರ್ವಜನಿಕರು ಸಹಕಾರ ನೀಡಿ ಎಂದು ಕೊರಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಹಾಗೂ ಎಸ್.ಎಫ್.ಟಿ ಮಾರ್ಗದರ್ಶರಾದ ಈಶ್ವರ್ ದಾಸಪ್ಪನವರ್ ಮಾತನಾಡಿ ಆರೋಗ್ಯ ಶಿಕ್ಷಣವನ್ನು ವಿವಿಧ ಬಗೆಗಳಲ್ಲಿ ಸಾರ್ವಜನಿಕರಿಗೆ ಮನಮುಟ್ಟುವಂತೆ ನೀಡುವ ಕಾರ್ಯ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾದ್ಯಂತ ಕ್ಷಯ ರೋಗ ನಿರ್ಮೂಲನೆ ಕಾರ್ಯಕ್ರಮಗಳನ್ನು ಗುಂಪುಸಭೆ, ಮನೆ ಭೇಟಿ, ಕಲಾ ತಂಡಗಳಿಂದ ವಿಡಿಯೋ ವಾಹನದ ಮೂಲಕ, ಪತ್ರಿಕೆ, ಜಾಥಾ, ಮುಂತಾದವುಗಳನ್ನು ಗ್ರಾಮ, ಹೋಬಳಿ, ತಾಲೂಕುವಾರು ಕೈಗೊಳ್ಳಲಾಗುವುದು. ಕ್ಷಯ ರೋಗದ ಲಕ್ಷಣಗಳ ಇಳಿಕೆಗಳಲ್ಲಿ ರಾಜ್ಯದಲ್ಲಿ ಬಳ್ಳಾರಿ ಜಿಲ್ಲೆಯು ಸಹ ಒಂದಾಗಿದೆ ಎಂದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ ತಿಪ್ಪೇಸ್ವಾಮಿ ರೆಡ್ಡಿ, ಡಾ ನಾಗರಾಜ ಪೂಜಾರಿ, ಎಸ್.ಎಫ್.ಟಿ. ಮೇಲ್ವಿಚಾರಕರಾದ ಡಾ. ಮಂಜುನಾಥ್.ಟಿ.ಎ, ಪಂಚಾಯತ ಅಭಿವೃದ್ಧಿ ಅಧಿಕಾರಿ ಶಿವಕುಮಾರ್ ಕೋರಿ, ಪ್ರಮುಖರಾದ ಪೂಜಾರಿ ಸಿದ್ದಯ್ಯ, ಬಿ.ಉಮೇಶ್, ಡ್ರೈವರ್ ಹುಲುಗಪ್ಪ, ಎನ್.ಹನುಮಂತ, ಅನಿಲ್, ಪೈಲ್ವಾನ್ ಸದ್ದಾಂ, ರಾಘವೇಂದ್ರ, ಲಕ್ಷ್ಮಣ್ ಭಂಡಾರಿ, ಯುವ ಮುಖಂಡರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಶೋಧನಾ ವಿದ್ಯಾರ್ಥಿ ಈಶ್ವರ್, ಪ್ರಶಿಕ್ಷಣಾರ್ಥಿ ಖುರ್ಷಿದಾ ಬೇಗಂ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರಾದ ಮೊಹಮ್ಮದ್‌ ಖಾಸಿಂ, ಭೀಮರಾಜ್ ರೆಡ್ಡಿ, ಚಿದಾನಂದ, ಅನ್ನದಾನಪ್ಪ ಅಬ್ಬಿಗೇರಿ, ಹುಲುಗಪ್ಪ, ಸಿ.ಹೆಚ್.ಒ, ಪಿ.ಹೆಚ್.ಸಿ,ಹೆಚ್.ಐ.ಒ,ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ತಾಯಂದಿರು, ನರೇಗಾ ಕೂಲಿ ಕಾರ್ಮಿಕರು ಭಾಗಿಯಾಗಿದ್ದರು.

ಆರೋಗ್ಯ ತಪಾಸಣೆ:
ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕಫ ಪರೀಕ್ಷೆ, ರಕ್ತದೊತ್ತಡ, ಸಕ್ಕರೆ ಖಾಯಿಲೆ, ಕಣ್ಣಿನ ಪರೀಕ್ಷೆ ಕೈಗೊಳ್ಳಲಾಯಿತು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...