Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ : ಬಿಎಸ್ವೈ ಹೇಳಿದ್ದೇನು..?

---Advertisement---

ಚಿಕ್ಕಮಗಳೂರು: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಇದರಿಂದ ಶಾಸಕ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದನ್ನ ಜಮೀನು ವಿವಾದವೆಂದು ತನಿಖೆ ಮಾಡಿದ್ದರು. ಬಳಿಕ ಯೋಗೀಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿಕೊಟ್ಟಿತ್ತು.

ಶಿಕ್ಷೆಯ ಪ್ರಮಾಣ ಪ್ರಕಟವಾದ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಅವತ್ತು ಆಡಿದ ಮಾತು ಸತ್ಯವಾಗಿದೆ. ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ. ಅವರ ಕುಟುಂಬಕ್ಕೆ ದೊಡ್ಡ ನೋವು ತರುವಂತಹ ಸಂಗತಿ. ಅಪರಾಧ ಆಗಿತ್ತೋ ಆ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನೇ ಹೇಳಿದ್ದೆ ಎಂದಿದ್ದಾರೆ.

ಅತ್ತ ಯೋಗೀಶ್ ಗೌಡ ಕುಟುಂಬಕ್ಕೆ ಪರಿಹಾರವನ್ನು ನೀಡುವಂತೆ ಕೋರ್ಟ್ ತಿಳಿಸಿದೆ. ತೀರ್ಪಿನ ಅತ್ಯಂತ ಪ್ರಮುಖ ಹಾಗೂ ಮಾನವೀಯ ಅಂಶವೆಂದರೆ ಹತ್ಯೆಗೀಡಾದ ಯೋಗೀಶ್ ಗೌಡ ಅವರ ಕುಟುಂಬಕ್ಕೆ ಸಿಕ್ಕಿರುವ ಆರ್ಥಿಕ ನ್ಯಾಯ. ಯೋಗೀಶ್ ಗೌಡ ಅವರ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿಗಳನ್ನು ನೀಡುವಂತೆ ವಿನಯ್ ಕುಲಕರ್ಣಿ ಅವರಿಗೆ ಕಟ್ಟು ನಿಟ್ಟಿನ ಸೂಚನೆಯನ್ನು ನೀಡಿದೆಮ ತಂದೆಯನ್ನು ಕಳೆದುಕೊಂಡ ಮಕ್ಕಳ ಭವಿಷ್ಯ ಮತ್ತು ವಿದ್ಯಾಭ್ಯಾಸದ ದೃಷ್ಟಿಯಿಂದ ಈ ಪರಿಹಾರದ ಮೊತ್ತವನ್ನು ಪಾವತಿಸಬೇಕೆಂದು ಶಾಸಕರಿಗೆ ಆದೇಶ ನೀಡಿದೆ.

2016 ರಲ್ಲಿ ನಡೆದ ಕೊ** ಕೇಸಲ್ಲಿ ಬರೋಬ್ಬರಿ ಹತ್ತು ವರ್ಷದಿಂದ ನಡೆಯುತ್ತಿದ್ದ ಈ ಕೇಸಲ್ಲಿ ಬಚಾವ್ ಆಗ್ತೀವಿ ಅಂತ ವಿನಯ್ ಕುಲಕರ್ಣಿ ಅವರು ಭಾವಿಸಿದ್ದರು ಎನಿಸುತ್ತದೆ. ಆದರೆ ಕೋರ್ಟ್ ಸರಿಯಾದ ತೀರ್ಪು ನೀಡಿದೆ ಎಂದೇ ಎಲ್ಲರೂ ಭಾವಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now